ಕ್ರೀಡೆ

ಫಿಫಾ ವಿಶ್ವಕಪ್ : ಫೈನಲ್​ ತಲುಪಿದ ಅರ್ಜೆಂಟೀನಾ

ಅಲ್ ದಾಯೆನ್ (ಕತಾರ್): ಕತಾರ್​​ ಫಿಫಾ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ತವರು ತಂಡವಾದ ಸೌದಿ ಅರೇಬಿಯಾ ವಿರುದ್ಧ ಸೋತಾಗ ವಿಶ್ವಶ್ರೇಷ್ಠ ತಂಡವಾದ ಅರ್ಜೆಂಟೀನಾವನ್ನು ಗೇಲಿ ಮಾಡಿದವರೇ ಹೆಚ್ಚು. ಲಿಯೋನೆಲ್​ ಮೆಸ್ಸಿಯಂತಹ ಈ ಪೀಳಿಗೆಯ ಶ್ರೇಷ್ಠ ಆಟಗಾರರಿರುವ ತಂಡ ಹೀನಾಯವಾಗಿ ಸೋತಿದ್ದು, ಯಾರಿಂದಲೂ ಅರಗಿಸಿಕೊಳ್ಳಲಾಗಲಿಲ್ಲ.

ಮೊದಲ ಸೋಲು ತಂಡದ ತಂತ್ರಗಳನ್ನೇ ಬದಲಿಸಿತು. ವಿಶ್ವಕಪ್​ ಗೆದ್ದು ತೋರಿಸುವ ಛಲ ತೊಟ್ಟ ಆಟಗಾರರು ವಿಶ್ವಕಪ್​ ಗೆಲ್ಲಲೇಬೇಕೆಂಬ ಹಠದೊಂದಿಗೆ ಕಾಲ್ಚೆಂಡಿನ ಜೊತೆ ಹಠಕ್ಕೆ ಬಿದ್ದು ಹೋರಾಡಿದರು. ಅದರ ಫಲಿತಾಂಶವೇ ಇಂದು ಅರ್ಜೆಂಟೀನಾ ವಿಶ್ವಕಪ್​ನ ಮೊದಲ ತಂಡವಾಗಿ ಪೈನಲ್​ ತಲುಪಿದೆ. ಅಚ್ಚರಿಗಳನ್ನೇ ಸೃಷ್ಟಿಸುತ್ತ ಬಂದಿದ್ದ ಕ್ರೊವೇಷಿಯಾ ಎದುರು ಮಧ್ಯರಾತ್ರಿ ನಡೆದ ಪಂದ್ಯದಲ್ಲಿ 3-0 ಗೋಲುಗಳಿಂದ ಗೆದ್ದು ಅಂತಿಮ ಹಣಾಹಣಿಗೆ ಅರ್ಹತೆ ಪಡೆಯಿತು.ಬಹುತೇಕ ಅಂತಿಮ ವಿಶ್ವಕಪ್​ ಆಡುತ್ತಿರುವ ಲಿಯೋನೆಲ್​ ಮೆಸ್ಸಿ 34 ನೇ ನಿಮಿಷದಲ್ಲಿ ಬಾರಿಸಿದ ಗೋಲು, ತಂಡದ ಭರವಸೆಯ ಆಟಗಾರ ಜೂಲಿಯನ್ ಅಲ್ವಾರೆಜ್ ಬ್ರೇಸ್​ 39, 69 ನೇ ನಿಮಿಷದಲ್ಲಿ ದಾಖಲಿಸಿದ ಎರಡುಗಳ ಗೋಲುಗಳು ಕ್ರೊವೇಷಿಯಾದ ಫೈನಲ್​ ಹಾದಿಯನ್ನು ಮುಚ್ಚಿ ಹಾಕಿತು.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

55 mins ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

59 mins ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

1 hour ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

1 hour ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

2 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago