ಕ್ರೀಡೆ

ಫಿಫಾ ವಿಶ್ವಕಪ್: ಮೊರಾಕ್ಕೊ ಮಣಿಸಿ ಫ್ರಾನ್ಸ್ ಫೈನಲ್ ಗೆ

ದೋಹಾ: ಫಿಫಾ ವಿಶ್ವಕಪ್ ಟೂರ್ನಿ ಕೊನೆಯ ಹಂತ ತಲುಪಿದೆ. ಬುಧವಾರ ತಡರಾತ್ರಿ ನಡೆದ 2ನೇ ಸೆಮಿ ಫೈನಲ್ ನಲ್ಲಿ ಮೊರಾಕೊ ತಂಡವನ್ನು ಬಲಿಷ್ಠ ಫ್ರಾನ್ಸ್ ತಂಡ 2-0 ಅಂತರದ ಗೋಲುಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.

ಕತಾರ್‌ನ ಅಲ್ ಬಯಾತ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಫ್ರಾನ್ಸ್‌ನ ಥಿಯೊ ಹರ್ನಾಂಡಿಸ್ 5ನೇ ನಿಮಿಷದಲ್ಲಿ ಮೊದಲ ಗೋಲು ಹೊಡೆದರು. ನಂತರ 79ನೇ ನಿಮಿಷದಲ್ಲಿ ರಾಂಡಲ್ ಕೊಲೊ ಮುವಾನಿ ಎರಡನೇ ಗೋಲು ಹೊಡೆಯುವ ಮೂಲಕ ಫ್ರಾನ್ಸ್ ಗೆಲುವನ್ನು ಸ್ಪಷ್ಟಗೊಳಿಸಿದರು. ಪಂದ್ಯದ ಆರಂಭದಿಂದಲೂ ಫ್ರಾನ್ಸ್ ಆಕ್ರಮಣಕಾರಿ ಆಟವಾಡಿತು.
ಪಂದ್ಯ ಆರಂಭವಾದ  5ನೇ ನಿಮಿಷದಲ್ಲೇ ಫ್ರಾನ್ಸ್ ಪರ ಥಿಯೋ ಹೆರ್ನಾಂಡೆಜ್ ಮೊದಲ ಗೋಲು ಹೊಡೆದರು. ಇದು ಮೊರಾಕ್ಕೊ ತಂಡವು ಈ ಬಾರಿಯ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಬಿಟ್ಟುಕೊಟ್ಟ ಮೊದಲ ಗೋಲು ಎನಿಸಿಕೊಂಡಿತು.

ತದನಂತರ ಮೊರಾಕ್ಕೊ ಗೋಲು ಗಳಿಸಲು ನಿರಂತರ ಪ್ರಯತ್ನಿಸಿದರೂ ಫ್ರಾನ್ಸ್ ರಕ್ಷಣಗಾರರ ಗೋಡೆ ಭೇದಿಸಲು ಮೊರಾಕೊ ತಂಡಕ್ಕೆ ಗೋಲು ಗಳಿಸಲು ಅವಕಾಶ ನೀಡಲಿಲ್ಲ. 1-0 ಅಂತರದಲ್ಲೇ ಪಂದ್ಯವನ್ನು ಫ್ರಾನ್ಸ್ ಕೊನೆಯ ಹಂತಕ್ಕೆ ಸಾಗಿಸಿತು. ಈ ವೇಳೆ ಫ್ರಾನ್ಸ್ ಪರ ಬದಲಿ ಆಟಗಾರನಾಗಿ ಕಣಕ್ಕಿಳಿದ ರಾಂಡಲ್ ಕೊಲೊ ಮುವಾನಿ 79ನೇ ನಿಮಿಷದಲ್ಲಿ ಗೋಲು ಗಳಿಸಿ ತಂಡದ ಗೆಲುವನ್ನು ಸ್ಪಷ್ಟಪಡಿಸಿದರು.  ಉಸ್ಮಾನ್ ಡೆಂಬೆಲೆಗೆ ಬದಲಾಗಿ ಕಣಕ್ಕಿಳಿದ ರಾಂಡಲ್ ಕೊಲೊ ಮುವಾನಿ ಎಂಬಪ್ಪೆ ನೀಡಿದ ರೀಬೌಂಡ್ ಪಾಸ್ ಸ್ವೀಕರಿಸಿ ತಡ ಮಾಡದೇ ಮೊರಾಕ್ಕೋ ಗೋಲ್ ಕೀಪರ್ ರನ್ನು ವಂಚಿಸಿ ಗೋಲು ಗಳಿಸಿದರು.
ಪಂದ್ಯದ ನಿಗದಿತ ಅವಧಿಯಲ್ಲಿ ಫ್ರಾನ್ಸ್ ಮುನ್ನಡೆ ಸಾಧಿಸಿತು.
ಇದೇ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡ ಲಿಯೋನಲ್ ಮೆಸ್ಸಿ ನೇತೃತ್ವದ ಬಲಿಷ್ಟ ತಂಡ ಅರ್ಜೆಂಟಿನಾ ತಂಡವನ್ನು ಎದುರಿಸಲಿದೆ.ಫ್ರಾನ್ಸ್‌ ತಂಡವು ನಾಲ್ಕನೇ ಬಾರಿಗೆ ಫಿಫಾ ವಿಶ್ವಕಪ್‌ ಫೈನಲ್‌ಗೇರಿದಂತಾಗಿದೆ. ಫೈನಲ್‌ನಲ್ಲಿ ಫ್ರಾನ್ಸ್‌ ತಂಡವು ಅರ್ಜೆಂಟೀನಾ ಎದುರು ಜಯ ಗಳಿಸಿದರೆ, 60 ವರ್ಷಗಳ ನಂತರ ಸತತ ಎರಡು ಫಿಫಾ ವಿಶ್ವಕಪ್ ಜಯಿಸಿದ ಎರಡನೇ ತಂಡ ಎನ್ನುವ ಹಿರಿಮೆಗೆ ಪಾತ್ರವಾಗಲಿದೆ. ಈ ಮೊದಲು ಬ್ರೆಜಿಲ್ ತಂಡವು 1958 ಹಾಗೂ 1962ರಲ್ಲಿ ಸತತ ಎರಡು ಬಾರಿಗೆ ಫಿಫಾ ವಿಶ್ವಕಪ್ ಜಯಿಸಿ ದಾಖಲೆ ನಿರ್ಮಿಸಿತ್ತು.

andolanait

Recent Posts

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

39 mins ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

48 mins ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

1 hour ago

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

1 hour ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

3 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

3 hours ago