ಕ್ರೀಡೆ

ಫಿಫಾ ವಿಶ್ವಕಪ್: ಮೊರಾಕ್ಕೊ ಮಣಿಸಿ ಫ್ರಾನ್ಸ್ ಫೈನಲ್ ಗೆ

ದೋಹಾ: ಫಿಫಾ ವಿಶ್ವಕಪ್ ಟೂರ್ನಿ ಕೊನೆಯ ಹಂತ ತಲುಪಿದೆ. ಬುಧವಾರ ತಡರಾತ್ರಿ ನಡೆದ 2ನೇ ಸೆಮಿ ಫೈನಲ್ ನಲ್ಲಿ ಮೊರಾಕೊ ತಂಡವನ್ನು ಬಲಿಷ್ಠ ಫ್ರಾನ್ಸ್ ತಂಡ 2-0 ಅಂತರದ ಗೋಲುಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.

ಕತಾರ್‌ನ ಅಲ್ ಬಯಾತ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಫ್ರಾನ್ಸ್‌ನ ಥಿಯೊ ಹರ್ನಾಂಡಿಸ್ 5ನೇ ನಿಮಿಷದಲ್ಲಿ ಮೊದಲ ಗೋಲು ಹೊಡೆದರು. ನಂತರ 79ನೇ ನಿಮಿಷದಲ್ಲಿ ರಾಂಡಲ್ ಕೊಲೊ ಮುವಾನಿ ಎರಡನೇ ಗೋಲು ಹೊಡೆಯುವ ಮೂಲಕ ಫ್ರಾನ್ಸ್ ಗೆಲುವನ್ನು ಸ್ಪಷ್ಟಗೊಳಿಸಿದರು. ಪಂದ್ಯದ ಆರಂಭದಿಂದಲೂ ಫ್ರಾನ್ಸ್ ಆಕ್ರಮಣಕಾರಿ ಆಟವಾಡಿತು.
ಪಂದ್ಯ ಆರಂಭವಾದ  5ನೇ ನಿಮಿಷದಲ್ಲೇ ಫ್ರಾನ್ಸ್ ಪರ ಥಿಯೋ ಹೆರ್ನಾಂಡೆಜ್ ಮೊದಲ ಗೋಲು ಹೊಡೆದರು. ಇದು ಮೊರಾಕ್ಕೊ ತಂಡವು ಈ ಬಾರಿಯ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಬಿಟ್ಟುಕೊಟ್ಟ ಮೊದಲ ಗೋಲು ಎನಿಸಿಕೊಂಡಿತು.

ತದನಂತರ ಮೊರಾಕ್ಕೊ ಗೋಲು ಗಳಿಸಲು ನಿರಂತರ ಪ್ರಯತ್ನಿಸಿದರೂ ಫ್ರಾನ್ಸ್ ರಕ್ಷಣಗಾರರ ಗೋಡೆ ಭೇದಿಸಲು ಮೊರಾಕೊ ತಂಡಕ್ಕೆ ಗೋಲು ಗಳಿಸಲು ಅವಕಾಶ ನೀಡಲಿಲ್ಲ. 1-0 ಅಂತರದಲ್ಲೇ ಪಂದ್ಯವನ್ನು ಫ್ರಾನ್ಸ್ ಕೊನೆಯ ಹಂತಕ್ಕೆ ಸಾಗಿಸಿತು. ಈ ವೇಳೆ ಫ್ರಾನ್ಸ್ ಪರ ಬದಲಿ ಆಟಗಾರನಾಗಿ ಕಣಕ್ಕಿಳಿದ ರಾಂಡಲ್ ಕೊಲೊ ಮುವಾನಿ 79ನೇ ನಿಮಿಷದಲ್ಲಿ ಗೋಲು ಗಳಿಸಿ ತಂಡದ ಗೆಲುವನ್ನು ಸ್ಪಷ್ಟಪಡಿಸಿದರು.  ಉಸ್ಮಾನ್ ಡೆಂಬೆಲೆಗೆ ಬದಲಾಗಿ ಕಣಕ್ಕಿಳಿದ ರಾಂಡಲ್ ಕೊಲೊ ಮುವಾನಿ ಎಂಬಪ್ಪೆ ನೀಡಿದ ರೀಬೌಂಡ್ ಪಾಸ್ ಸ್ವೀಕರಿಸಿ ತಡ ಮಾಡದೇ ಮೊರಾಕ್ಕೋ ಗೋಲ್ ಕೀಪರ್ ರನ್ನು ವಂಚಿಸಿ ಗೋಲು ಗಳಿಸಿದರು.
ಪಂದ್ಯದ ನಿಗದಿತ ಅವಧಿಯಲ್ಲಿ ಫ್ರಾನ್ಸ್ ಮುನ್ನಡೆ ಸಾಧಿಸಿತು.
ಇದೇ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡ ಲಿಯೋನಲ್ ಮೆಸ್ಸಿ ನೇತೃತ್ವದ ಬಲಿಷ್ಟ ತಂಡ ಅರ್ಜೆಂಟಿನಾ ತಂಡವನ್ನು ಎದುರಿಸಲಿದೆ.ಫ್ರಾನ್ಸ್‌ ತಂಡವು ನಾಲ್ಕನೇ ಬಾರಿಗೆ ಫಿಫಾ ವಿಶ್ವಕಪ್‌ ಫೈನಲ್‌ಗೇರಿದಂತಾಗಿದೆ. ಫೈನಲ್‌ನಲ್ಲಿ ಫ್ರಾನ್ಸ್‌ ತಂಡವು ಅರ್ಜೆಂಟೀನಾ ಎದುರು ಜಯ ಗಳಿಸಿದರೆ, 60 ವರ್ಷಗಳ ನಂತರ ಸತತ ಎರಡು ಫಿಫಾ ವಿಶ್ವಕಪ್ ಜಯಿಸಿದ ಎರಡನೇ ತಂಡ ಎನ್ನುವ ಹಿರಿಮೆಗೆ ಪಾತ್ರವಾಗಲಿದೆ. ಈ ಮೊದಲು ಬ್ರೆಜಿಲ್ ತಂಡವು 1958 ಹಾಗೂ 1962ರಲ್ಲಿ ಸತತ ಎರಡು ಬಾರಿಗೆ ಫಿಫಾ ವಿಶ್ವಕಪ್ ಜಯಿಸಿ ದಾಖಲೆ ನಿರ್ಮಿಸಿತ್ತು.

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

1 hour ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

4 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

5 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

9 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

9 hours ago