ಕ್ರೀಡೆ

ಫಿಫಾ ವಿಶ್ವಕಪ್: ಮೊರಾಕ್ಕೊ ಮಣಿಸಿ ಫ್ರಾನ್ಸ್ ಫೈನಲ್ ಗೆ

ದೋಹಾ: ಫಿಫಾ ವಿಶ್ವಕಪ್ ಟೂರ್ನಿ ಕೊನೆಯ ಹಂತ ತಲುಪಿದೆ. ಬುಧವಾರ ತಡರಾತ್ರಿ ನಡೆದ 2ನೇ ಸೆಮಿ ಫೈನಲ್ ನಲ್ಲಿ ಮೊರಾಕೊ ತಂಡವನ್ನು ಬಲಿಷ್ಠ ಫ್ರಾನ್ಸ್ ತಂಡ 2-0 ಅಂತರದ ಗೋಲುಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.

ಕತಾರ್‌ನ ಅಲ್ ಬಯಾತ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಫ್ರಾನ್ಸ್‌ನ ಥಿಯೊ ಹರ್ನಾಂಡಿಸ್ 5ನೇ ನಿಮಿಷದಲ್ಲಿ ಮೊದಲ ಗೋಲು ಹೊಡೆದರು. ನಂತರ 79ನೇ ನಿಮಿಷದಲ್ಲಿ ರಾಂಡಲ್ ಕೊಲೊ ಮುವಾನಿ ಎರಡನೇ ಗೋಲು ಹೊಡೆಯುವ ಮೂಲಕ ಫ್ರಾನ್ಸ್ ಗೆಲುವನ್ನು ಸ್ಪಷ್ಟಗೊಳಿಸಿದರು. ಪಂದ್ಯದ ಆರಂಭದಿಂದಲೂ ಫ್ರಾನ್ಸ್ ಆಕ್ರಮಣಕಾರಿ ಆಟವಾಡಿತು.
ಪಂದ್ಯ ಆರಂಭವಾದ  5ನೇ ನಿಮಿಷದಲ್ಲೇ ಫ್ರಾನ್ಸ್ ಪರ ಥಿಯೋ ಹೆರ್ನಾಂಡೆಜ್ ಮೊದಲ ಗೋಲು ಹೊಡೆದರು. ಇದು ಮೊರಾಕ್ಕೊ ತಂಡವು ಈ ಬಾರಿಯ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಬಿಟ್ಟುಕೊಟ್ಟ ಮೊದಲ ಗೋಲು ಎನಿಸಿಕೊಂಡಿತು.

ತದನಂತರ ಮೊರಾಕ್ಕೊ ಗೋಲು ಗಳಿಸಲು ನಿರಂತರ ಪ್ರಯತ್ನಿಸಿದರೂ ಫ್ರಾನ್ಸ್ ರಕ್ಷಣಗಾರರ ಗೋಡೆ ಭೇದಿಸಲು ಮೊರಾಕೊ ತಂಡಕ್ಕೆ ಗೋಲು ಗಳಿಸಲು ಅವಕಾಶ ನೀಡಲಿಲ್ಲ. 1-0 ಅಂತರದಲ್ಲೇ ಪಂದ್ಯವನ್ನು ಫ್ರಾನ್ಸ್ ಕೊನೆಯ ಹಂತಕ್ಕೆ ಸಾಗಿಸಿತು. ಈ ವೇಳೆ ಫ್ರಾನ್ಸ್ ಪರ ಬದಲಿ ಆಟಗಾರನಾಗಿ ಕಣಕ್ಕಿಳಿದ ರಾಂಡಲ್ ಕೊಲೊ ಮುವಾನಿ 79ನೇ ನಿಮಿಷದಲ್ಲಿ ಗೋಲು ಗಳಿಸಿ ತಂಡದ ಗೆಲುವನ್ನು ಸ್ಪಷ್ಟಪಡಿಸಿದರು.  ಉಸ್ಮಾನ್ ಡೆಂಬೆಲೆಗೆ ಬದಲಾಗಿ ಕಣಕ್ಕಿಳಿದ ರಾಂಡಲ್ ಕೊಲೊ ಮುವಾನಿ ಎಂಬಪ್ಪೆ ನೀಡಿದ ರೀಬೌಂಡ್ ಪಾಸ್ ಸ್ವೀಕರಿಸಿ ತಡ ಮಾಡದೇ ಮೊರಾಕ್ಕೋ ಗೋಲ್ ಕೀಪರ್ ರನ್ನು ವಂಚಿಸಿ ಗೋಲು ಗಳಿಸಿದರು.
ಪಂದ್ಯದ ನಿಗದಿತ ಅವಧಿಯಲ್ಲಿ ಫ್ರಾನ್ಸ್ ಮುನ್ನಡೆ ಸಾಧಿಸಿತು.
ಇದೇ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡ ಲಿಯೋನಲ್ ಮೆಸ್ಸಿ ನೇತೃತ್ವದ ಬಲಿಷ್ಟ ತಂಡ ಅರ್ಜೆಂಟಿನಾ ತಂಡವನ್ನು ಎದುರಿಸಲಿದೆ.ಫ್ರಾನ್ಸ್‌ ತಂಡವು ನಾಲ್ಕನೇ ಬಾರಿಗೆ ಫಿಫಾ ವಿಶ್ವಕಪ್‌ ಫೈನಲ್‌ಗೇರಿದಂತಾಗಿದೆ. ಫೈನಲ್‌ನಲ್ಲಿ ಫ್ರಾನ್ಸ್‌ ತಂಡವು ಅರ್ಜೆಂಟೀನಾ ಎದುರು ಜಯ ಗಳಿಸಿದರೆ, 60 ವರ್ಷಗಳ ನಂತರ ಸತತ ಎರಡು ಫಿಫಾ ವಿಶ್ವಕಪ್ ಜಯಿಸಿದ ಎರಡನೇ ತಂಡ ಎನ್ನುವ ಹಿರಿಮೆಗೆ ಪಾತ್ರವಾಗಲಿದೆ. ಈ ಮೊದಲು ಬ್ರೆಜಿಲ್ ತಂಡವು 1958 ಹಾಗೂ 1962ರಲ್ಲಿ ಸತತ ಎರಡು ಬಾರಿಗೆ ಫಿಫಾ ವಿಶ್ವಕಪ್ ಜಯಿಸಿ ದಾಖಲೆ ನಿರ್ಮಿಸಿತ್ತು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago