ಕ್ರೀಡೆ

ಫಿಫಾ ವಿಶ್ವ ಕಪ್ ಕೆನಡಾ ವಿರುದ್ಧ ಬೆಲ್ಜಿಯಂ 1-0 ಗೋಲಿನಿಂದ ವಿಜಯ

ದೋಹಾ: ಫಿಫಾ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಎಫ್ ಬಣದ ಬೆಲ್ಜಿಯಂ ತಂಡವು ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್‌ ಕೋರ್ಟೊಯಿಸ್‌ ಅವರ ಅದ್ಭುತ ನಿರ್ವಹಣೆಯಿಂದ ಬಲಿಷ್ಟ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಶುಭಾರಂಭ ಮಾಡಿತು.

ಈ ಗೆಲುವಿನಿಂದ ಬೆಲ್ಜಿಯಂ ಬಣದಲ್ಲಿ ಮೊದಲ ಶ್ರೇಯಾಂಕ ಪಡೆಯಿತು. ರೊಮೆಲು ಲುಕಾಕು ಅವರು ಗಾಯಗೊಂಡ ಕಾರಣ ಬೆಲ್ಜಿಯಂನ ದಾಳಿಯ ನೇತೃತ್ವ ಬಥ್‌ಶುವಾಯಿ
ವಹಿಸಿದ್ದರು.

ಪಂದ್ಯದ ಮೊದಲ ಅವಧಿಯಲ್ಲಿ ಬಥ್‌ಶುವಾಯಿ ಗೋಲು ಹೊಡೆದು ಮುನ್ನಡೆ ಕೊಟ್ಟರು. ಆನಂತರ ಥಿಬಾಟ್‌ ಕೋರ್ಟೊಯಿಸ್‌ ಅವರು ಕೆನಡಾದ ಅಲೊನ್ಸೊ ಡೇವಿಸ್‌ ಅವರಿಗೆ ಲಭಿಸಿದ ಪೆನಾಲ್ಟಿ ಅವಕಾಶವನ್ನು ತಡೆದು ಕೆನಡಾ ಸಮಬಲ ಸಾಧಿಸುವ ಅವಕಾಶ ತಪ್ಪಿಸಿದರು.

ಕೆನಡಾ ತಂಡವು ಸಹ ಅತ್ಯಂತ ಉತ್ಸಾಹದಿಂದ ಆಟ ಆರಂಭಿಸಿ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿತ್ತು. ಪಂದ್ಯದ 11ನೇ ನಿಮಿಷದಲ್ಲಿ ಬೆಲ್ಜಿಯಂನ ಯಾನ್ನಿಕ್‌ ಕ್ಯಾರಾಸ್ಕೊ ಚೆಂಡನ್ನು ಕೈಯಲ್ಲಿ ಮುಟ್ಟಿದ ಕಾರಣ ಕೆನಡಕ್ಕೆ ಪೆನಾಲ್ಟಿ ಅವಕಾಶ ಸಿಕ್ಕಿತು. ಅಲ್ಫಾನ್ಸೊ ಡೇವಿಸ್‌ ಪೆನಾಲ್ಟಿ ಹೊಡೆಯುವ ಅವಕಾಶ ಪಡೆದರು. ವಿಶ್ವದ ಶ್ರೇಷ್ಠ ಗೋಲ್‌ಕೀಪರ್‌ಗಳಲ್ಲಿ ಒಬ್ಬರಾಗಿರುವ ಕೋರ್ಟೊಯಿಸ್‌ ಅವರು ಡೇವಿಸ್‌ ಅವರಿಗೆ ಐತಿಹಾಸಿಕ ಗೋಲು ದಾಖಲಿಸಲು ನಿರಾಕರಿಸಿದರು. ಅವರ ಉತ್ತಮ ಹೊಡೆತವನ್ನು ಕೋಟೋಯಿಸ್‌ ಅದ್ಭುತ ರೀತಿಯಲ್ಲಿ ತಡೆದರು.
ಇದರಿಂದ ಕೆನಡಾ ಮುನ್ನಡೆ ಸಾಧಿಸಲು ಸಾಧ್ಯವಾಗಲೇಯಿಲ್ಲ.
ಕೆನಡಾ ತಂಡ 36 ವರ್ಷಗಳ ಸುದೀರ್ಘ‌ ಸಮಯದ ಬಳಿಕ ವಿಶ್ವಕಪ್‌ನಲ್ಲಿ ಆಡಲು ಅರ್ಹತೆ
ಪಡೆದಿತ್ತು. 1986ರಲ್ಲಿ ಮೆಕ್ಸಿಕೊದಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ಆಡಿದ್ದ ಕೆನಡಾ ತಂಡವು ಆರಂಭದ ಮೂರು ಪಂದ್ಯಗಳಲ್ಲಿ ಸೋಲು ಕಂಡಿತಲ್ಲದೇ ಒಂದೇ ಒಂದು ಗೋಲು ಹೊಡೆಯಲು ಸಾಧ್ಯವಾಗಿರಲಿಲ್ಲ.
ಮೊರಾಕ್ಕೊ ಮತ್ತು ಕ್ರೊವೇಷ್ಯಾ ನಡುವಣ ಪಂದ್ಯ 0-0 ಅಂತರದಿಂದ ಡ್ರಾ ಆದ್ದರಿಂದ ಬೆಲ್ಜಿಯಂ ಮೇಲುಗೈ ಸಾಧಿಸಲು ಯಶಸ್ವಿಯಾಯಿತು.

andolanait

Recent Posts

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

28 mins ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

1 hour ago

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

2 hours ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

3 hours ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

3 hours ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

3 hours ago