ಕ್ರೀಡೆ

ಫಿಫಾ ವಿಶ್ವ ಕಪ್ ಕೆನಡಾ ವಿರುದ್ಧ ಬೆಲ್ಜಿಯಂ 1-0 ಗೋಲಿನಿಂದ ವಿಜಯ

ದೋಹಾ: ಫಿಫಾ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಎಫ್ ಬಣದ ಬೆಲ್ಜಿಯಂ ತಂಡವು ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್‌ ಕೋರ್ಟೊಯಿಸ್‌ ಅವರ ಅದ್ಭುತ ನಿರ್ವಹಣೆಯಿಂದ ಬಲಿಷ್ಟ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಶುಭಾರಂಭ ಮಾಡಿತು.

ಈ ಗೆಲುವಿನಿಂದ ಬೆಲ್ಜಿಯಂ ಬಣದಲ್ಲಿ ಮೊದಲ ಶ್ರೇಯಾಂಕ ಪಡೆಯಿತು. ರೊಮೆಲು ಲುಕಾಕು ಅವರು ಗಾಯಗೊಂಡ ಕಾರಣ ಬೆಲ್ಜಿಯಂನ ದಾಳಿಯ ನೇತೃತ್ವ ಬಥ್‌ಶುವಾಯಿ
ವಹಿಸಿದ್ದರು.

ಪಂದ್ಯದ ಮೊದಲ ಅವಧಿಯಲ್ಲಿ ಬಥ್‌ಶುವಾಯಿ ಗೋಲು ಹೊಡೆದು ಮುನ್ನಡೆ ಕೊಟ್ಟರು. ಆನಂತರ ಥಿಬಾಟ್‌ ಕೋರ್ಟೊಯಿಸ್‌ ಅವರು ಕೆನಡಾದ ಅಲೊನ್ಸೊ ಡೇವಿಸ್‌ ಅವರಿಗೆ ಲಭಿಸಿದ ಪೆನಾಲ್ಟಿ ಅವಕಾಶವನ್ನು ತಡೆದು ಕೆನಡಾ ಸಮಬಲ ಸಾಧಿಸುವ ಅವಕಾಶ ತಪ್ಪಿಸಿದರು.

ಕೆನಡಾ ತಂಡವು ಸಹ ಅತ್ಯಂತ ಉತ್ಸಾಹದಿಂದ ಆಟ ಆರಂಭಿಸಿ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿತ್ತು. ಪಂದ್ಯದ 11ನೇ ನಿಮಿಷದಲ್ಲಿ ಬೆಲ್ಜಿಯಂನ ಯಾನ್ನಿಕ್‌ ಕ್ಯಾರಾಸ್ಕೊ ಚೆಂಡನ್ನು ಕೈಯಲ್ಲಿ ಮುಟ್ಟಿದ ಕಾರಣ ಕೆನಡಕ್ಕೆ ಪೆನಾಲ್ಟಿ ಅವಕಾಶ ಸಿಕ್ಕಿತು. ಅಲ್ಫಾನ್ಸೊ ಡೇವಿಸ್‌ ಪೆನಾಲ್ಟಿ ಹೊಡೆಯುವ ಅವಕಾಶ ಪಡೆದರು. ವಿಶ್ವದ ಶ್ರೇಷ್ಠ ಗೋಲ್‌ಕೀಪರ್‌ಗಳಲ್ಲಿ ಒಬ್ಬರಾಗಿರುವ ಕೋರ್ಟೊಯಿಸ್‌ ಅವರು ಡೇವಿಸ್‌ ಅವರಿಗೆ ಐತಿಹಾಸಿಕ ಗೋಲು ದಾಖಲಿಸಲು ನಿರಾಕರಿಸಿದರು. ಅವರ ಉತ್ತಮ ಹೊಡೆತವನ್ನು ಕೋಟೋಯಿಸ್‌ ಅದ್ಭುತ ರೀತಿಯಲ್ಲಿ ತಡೆದರು.
ಇದರಿಂದ ಕೆನಡಾ ಮುನ್ನಡೆ ಸಾಧಿಸಲು ಸಾಧ್ಯವಾಗಲೇಯಿಲ್ಲ.
ಕೆನಡಾ ತಂಡ 36 ವರ್ಷಗಳ ಸುದೀರ್ಘ‌ ಸಮಯದ ಬಳಿಕ ವಿಶ್ವಕಪ್‌ನಲ್ಲಿ ಆಡಲು ಅರ್ಹತೆ
ಪಡೆದಿತ್ತು. 1986ರಲ್ಲಿ ಮೆಕ್ಸಿಕೊದಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ಆಡಿದ್ದ ಕೆನಡಾ ತಂಡವು ಆರಂಭದ ಮೂರು ಪಂದ್ಯಗಳಲ್ಲಿ ಸೋಲು ಕಂಡಿತಲ್ಲದೇ ಒಂದೇ ಒಂದು ಗೋಲು ಹೊಡೆಯಲು ಸಾಧ್ಯವಾಗಿರಲಿಲ್ಲ.
ಮೊರಾಕ್ಕೊ ಮತ್ತು ಕ್ರೊವೇಷ್ಯಾ ನಡುವಣ ಪಂದ್ಯ 0-0 ಅಂತರದಿಂದ ಡ್ರಾ ಆದ್ದರಿಂದ ಬೆಲ್ಜಿಯಂ ಮೇಲುಗೈ ಸಾಧಿಸಲು ಯಶಸ್ವಿಯಾಯಿತು.

andolanait

Recent Posts

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

38 mins ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

1 hour ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

1 hour ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

2 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

2 hours ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

3 hours ago