ಕ್ರೀಡೆ

ಫಿಫಾ ವಿಶ್ವ ಕಪ್ ಕೆನಡಾ ವಿರುದ್ಧ ಬೆಲ್ಜಿಯಂ 1-0 ಗೋಲಿನಿಂದ ವಿಜಯ

ದೋಹಾ: ಫಿಫಾ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಎಫ್ ಬಣದ ಬೆಲ್ಜಿಯಂ ತಂಡವು ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್‌ ಕೋರ್ಟೊಯಿಸ್‌ ಅವರ ಅದ್ಭುತ ನಿರ್ವಹಣೆಯಿಂದ ಬಲಿಷ್ಟ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಶುಭಾರಂಭ ಮಾಡಿತು.

ಈ ಗೆಲುವಿನಿಂದ ಬೆಲ್ಜಿಯಂ ಬಣದಲ್ಲಿ ಮೊದಲ ಶ್ರೇಯಾಂಕ ಪಡೆಯಿತು. ರೊಮೆಲು ಲುಕಾಕು ಅವರು ಗಾಯಗೊಂಡ ಕಾರಣ ಬೆಲ್ಜಿಯಂನ ದಾಳಿಯ ನೇತೃತ್ವ ಬಥ್‌ಶುವಾಯಿ
ವಹಿಸಿದ್ದರು.

ಪಂದ್ಯದ ಮೊದಲ ಅವಧಿಯಲ್ಲಿ ಬಥ್‌ಶುವಾಯಿ ಗೋಲು ಹೊಡೆದು ಮುನ್ನಡೆ ಕೊಟ್ಟರು. ಆನಂತರ ಥಿಬಾಟ್‌ ಕೋರ್ಟೊಯಿಸ್‌ ಅವರು ಕೆನಡಾದ ಅಲೊನ್ಸೊ ಡೇವಿಸ್‌ ಅವರಿಗೆ ಲಭಿಸಿದ ಪೆನಾಲ್ಟಿ ಅವಕಾಶವನ್ನು ತಡೆದು ಕೆನಡಾ ಸಮಬಲ ಸಾಧಿಸುವ ಅವಕಾಶ ತಪ್ಪಿಸಿದರು.

ಕೆನಡಾ ತಂಡವು ಸಹ ಅತ್ಯಂತ ಉತ್ಸಾಹದಿಂದ ಆಟ ಆರಂಭಿಸಿ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿತ್ತು. ಪಂದ್ಯದ 11ನೇ ನಿಮಿಷದಲ್ಲಿ ಬೆಲ್ಜಿಯಂನ ಯಾನ್ನಿಕ್‌ ಕ್ಯಾರಾಸ್ಕೊ ಚೆಂಡನ್ನು ಕೈಯಲ್ಲಿ ಮುಟ್ಟಿದ ಕಾರಣ ಕೆನಡಕ್ಕೆ ಪೆನಾಲ್ಟಿ ಅವಕಾಶ ಸಿಕ್ಕಿತು. ಅಲ್ಫಾನ್ಸೊ ಡೇವಿಸ್‌ ಪೆನಾಲ್ಟಿ ಹೊಡೆಯುವ ಅವಕಾಶ ಪಡೆದರು. ವಿಶ್ವದ ಶ್ರೇಷ್ಠ ಗೋಲ್‌ಕೀಪರ್‌ಗಳಲ್ಲಿ ಒಬ್ಬರಾಗಿರುವ ಕೋರ್ಟೊಯಿಸ್‌ ಅವರು ಡೇವಿಸ್‌ ಅವರಿಗೆ ಐತಿಹಾಸಿಕ ಗೋಲು ದಾಖಲಿಸಲು ನಿರಾಕರಿಸಿದರು. ಅವರ ಉತ್ತಮ ಹೊಡೆತವನ್ನು ಕೋಟೋಯಿಸ್‌ ಅದ್ಭುತ ರೀತಿಯಲ್ಲಿ ತಡೆದರು.
ಇದರಿಂದ ಕೆನಡಾ ಮುನ್ನಡೆ ಸಾಧಿಸಲು ಸಾಧ್ಯವಾಗಲೇಯಿಲ್ಲ.
ಕೆನಡಾ ತಂಡ 36 ವರ್ಷಗಳ ಸುದೀರ್ಘ‌ ಸಮಯದ ಬಳಿಕ ವಿಶ್ವಕಪ್‌ನಲ್ಲಿ ಆಡಲು ಅರ್ಹತೆ
ಪಡೆದಿತ್ತು. 1986ರಲ್ಲಿ ಮೆಕ್ಸಿಕೊದಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ಆಡಿದ್ದ ಕೆನಡಾ ತಂಡವು ಆರಂಭದ ಮೂರು ಪಂದ್ಯಗಳಲ್ಲಿ ಸೋಲು ಕಂಡಿತಲ್ಲದೇ ಒಂದೇ ಒಂದು ಗೋಲು ಹೊಡೆಯಲು ಸಾಧ್ಯವಾಗಿರಲಿಲ್ಲ.
ಮೊರಾಕ್ಕೊ ಮತ್ತು ಕ್ರೊವೇಷ್ಯಾ ನಡುವಣ ಪಂದ್ಯ 0-0 ಅಂತರದಿಂದ ಡ್ರಾ ಆದ್ದರಿಂದ ಬೆಲ್ಜಿಯಂ ಮೇಲುಗೈ ಸಾಧಿಸಲು ಯಶಸ್ವಿಯಾಯಿತು.

andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

5 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

5 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

6 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

6 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

7 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

7 hours ago