ಕ್ರೀಡೆ

ಫಿಫಾ ವಿಶ್ವ ಕಪ್ ಕೆನಡಾ ವಿರುದ್ಧ ಬೆಲ್ಜಿಯಂ 1-0 ಗೋಲಿನಿಂದ ವಿಜಯ

ದೋಹಾ: ಫಿಫಾ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಎಫ್ ಬಣದ ಬೆಲ್ಜಿಯಂ ತಂಡವು ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್‌ ಕೋರ್ಟೊಯಿಸ್‌ ಅವರ ಅದ್ಭುತ ನಿರ್ವಹಣೆಯಿಂದ ಬಲಿಷ್ಟ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಶುಭಾರಂಭ ಮಾಡಿತು.

ಈ ಗೆಲುವಿನಿಂದ ಬೆಲ್ಜಿಯಂ ಬಣದಲ್ಲಿ ಮೊದಲ ಶ್ರೇಯಾಂಕ ಪಡೆಯಿತು. ರೊಮೆಲು ಲುಕಾಕು ಅವರು ಗಾಯಗೊಂಡ ಕಾರಣ ಬೆಲ್ಜಿಯಂನ ದಾಳಿಯ ನೇತೃತ್ವ ಬಥ್‌ಶುವಾಯಿ
ವಹಿಸಿದ್ದರು.

ಪಂದ್ಯದ ಮೊದಲ ಅವಧಿಯಲ್ಲಿ ಬಥ್‌ಶುವಾಯಿ ಗೋಲು ಹೊಡೆದು ಮುನ್ನಡೆ ಕೊಟ್ಟರು. ಆನಂತರ ಥಿಬಾಟ್‌ ಕೋರ್ಟೊಯಿಸ್‌ ಅವರು ಕೆನಡಾದ ಅಲೊನ್ಸೊ ಡೇವಿಸ್‌ ಅವರಿಗೆ ಲಭಿಸಿದ ಪೆನಾಲ್ಟಿ ಅವಕಾಶವನ್ನು ತಡೆದು ಕೆನಡಾ ಸಮಬಲ ಸಾಧಿಸುವ ಅವಕಾಶ ತಪ್ಪಿಸಿದರು.

ಕೆನಡಾ ತಂಡವು ಸಹ ಅತ್ಯಂತ ಉತ್ಸಾಹದಿಂದ ಆಟ ಆರಂಭಿಸಿ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿತ್ತು. ಪಂದ್ಯದ 11ನೇ ನಿಮಿಷದಲ್ಲಿ ಬೆಲ್ಜಿಯಂನ ಯಾನ್ನಿಕ್‌ ಕ್ಯಾರಾಸ್ಕೊ ಚೆಂಡನ್ನು ಕೈಯಲ್ಲಿ ಮುಟ್ಟಿದ ಕಾರಣ ಕೆನಡಕ್ಕೆ ಪೆನಾಲ್ಟಿ ಅವಕಾಶ ಸಿಕ್ಕಿತು. ಅಲ್ಫಾನ್ಸೊ ಡೇವಿಸ್‌ ಪೆನಾಲ್ಟಿ ಹೊಡೆಯುವ ಅವಕಾಶ ಪಡೆದರು. ವಿಶ್ವದ ಶ್ರೇಷ್ಠ ಗೋಲ್‌ಕೀಪರ್‌ಗಳಲ್ಲಿ ಒಬ್ಬರಾಗಿರುವ ಕೋರ್ಟೊಯಿಸ್‌ ಅವರು ಡೇವಿಸ್‌ ಅವರಿಗೆ ಐತಿಹಾಸಿಕ ಗೋಲು ದಾಖಲಿಸಲು ನಿರಾಕರಿಸಿದರು. ಅವರ ಉತ್ತಮ ಹೊಡೆತವನ್ನು ಕೋಟೋಯಿಸ್‌ ಅದ್ಭುತ ರೀತಿಯಲ್ಲಿ ತಡೆದರು.
ಇದರಿಂದ ಕೆನಡಾ ಮುನ್ನಡೆ ಸಾಧಿಸಲು ಸಾಧ್ಯವಾಗಲೇಯಿಲ್ಲ.
ಕೆನಡಾ ತಂಡ 36 ವರ್ಷಗಳ ಸುದೀರ್ಘ‌ ಸಮಯದ ಬಳಿಕ ವಿಶ್ವಕಪ್‌ನಲ್ಲಿ ಆಡಲು ಅರ್ಹತೆ
ಪಡೆದಿತ್ತು. 1986ರಲ್ಲಿ ಮೆಕ್ಸಿಕೊದಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ಆಡಿದ್ದ ಕೆನಡಾ ತಂಡವು ಆರಂಭದ ಮೂರು ಪಂದ್ಯಗಳಲ್ಲಿ ಸೋಲು ಕಂಡಿತಲ್ಲದೇ ಒಂದೇ ಒಂದು ಗೋಲು ಹೊಡೆಯಲು ಸಾಧ್ಯವಾಗಿರಲಿಲ್ಲ.
ಮೊರಾಕ್ಕೊ ಮತ್ತು ಕ್ರೊವೇಷ್ಯಾ ನಡುವಣ ಪಂದ್ಯ 0-0 ಅಂತರದಿಂದ ಡ್ರಾ ಆದ್ದರಿಂದ ಬೆಲ್ಜಿಯಂ ಮೇಲುಗೈ ಸಾಧಿಸಲು ಯಶಸ್ವಿಯಾಯಿತು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago