ಹೈದರಾಬಾದ್ : ಟಿ ಟ್ವೆಂಟಿ ಫೈನಲ್ ಪಂದ್ಯದಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ರೋಚಕ ಪಂದ್ಯ ನಡೆದಿದ್ದು ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ರವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಆರು ವಿಕೆಟ್ಗಳ ಭರ್ಜರಿ ಜಯವನ್ನು ಭಾರತ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಗೆ 2-1 ಅಂತರದಲ್ಲಿ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿದೆ.
ಆಸ್ಟ್ರೇಲಿಯ ನೀಡಿದ 187 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೊಹ್ಲಿ ಮತ್ತು ಸೂರ್ಯಕುಮಾರ್ ರವರ ಸ್ಫೋಟಕ ಆಟ ದಿಂದಾಗಿ ಅಂತಿಮ ಓವರ್ ರೋಚಕ ಕ್ಷಣವೇ ಆಗಿತ್ತು ಎನ್ನಬಹುದು. ಅಂತಿಮವಾಗಿ 19.5 ಓವರ್ ಗಳ ಅಂತ್ಯಕ್ಕೆ ಭಾರತ ನಾಕು ವಿಕೆಟ್ ಕಳೆದುಕೊಂಡು 187 ರನ್ಗಳನ್ನು ಬೆನ್ನಟ್ಟುವ ಮೂಲಕ ಗೆಲುವನ್ನು ತಮ್ಮದಾಗಿಸಿಕೊಂಡು ದಾಖಲೆ ಬರೆದಿದೆ.
ದೊಡ್ಡ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೂಡ ಆರಂಭಿಕ ಆಘಾತ ಅನುಭವಿಸಿತು. ರಾಹುಲ್ 1 ರನ್ಗೆ ವಿಕೆಟ್ ಕೈಚೆಲ್ಲಿಕೊಂಡರೆ, ರೋಹಿತ್ ಶರ್ಮಾ ಆಟ 17 ರನ್ (14 ಎಸೆತ, 2 ಬೌಂಡರಿ, 1 ಸಿಕ್ಸ್) ಅಂತ್ಯಕಂಡಿತು. 30 ರನ್ಗಳಿಗೆ 2ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ಆ ಬಳಿಕ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ನೆರವಾದರು. ಈ ಜೋಡಿ ಆಸ್ಟ್ರೇಲಿಯಾ ಬೌಲರ್ಗಳ ಬೆವರಿಳಿಸಿದರು. ಭರ್ಜರಿ ಹೊಡೆತಗಳ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದ ಸೂರ್ಯಕುಮಾರ್ ಯಾದವ್ ಸ್ಫೋಟಕ ಇನ್ನಿಂಗ್ಸ್ 69 ರನ್ (36 ಎಸೆತ, 5 ಬೌಂಡರಿ, 5 ಸಿಕ್ಸ್)ಗೆ ಅಂತ್ಯಕಂಡಿತು. ಈ ಮೊದಲು 3ನೇ ವಿಕೆಟ್ಗೆ ಕೊಹ್ಲಿ ಜೊತೆ 104 ರನ್ (62 ಎಸೆತ) ಜೊತೆಯಾಟವಾಡಿದರು.
ಆ ಬಳಿಕ ಬಂದ ಹಾರ್ದಿಕ್ ಪಾಂಡ್ಯ ಕೊಹ್ಲಿ ಜೊತೆ ಗೆಲುವಿಗಾಗಿ ಹೋರಾಡಿದರು. ಅಂತಿಮವಾಗಿ ಕೊಹ್ಲಿ 63 ರನ್ (48 ಎಸೆತ, 3 ಬೌಂಡರಿ, 4 ಸಿಕ್ಸ್) ಚಚ್ಚಿ ಗೆಲುವಿನ ಅಂಚಿನಲ್ಲಿ ವಿಕೆಟ್ ಕಳೆದುಕೊಂಡರು. ಅಂತಿಮವಾಗಿ ಪಾಂಡ್ಯ ಅಜೇಯ 25 ರನ್ (16 ಎಸೆತ, 2 ಬೌಂಡರಿ, 1 ಸಿಕ್ಸ್) ಮತ್ತು ದಿನೇಶ್ ಕಾರ್ತಿಕ್ 1 ರನ್ ಬಾರಿಸಿ ಗೆಲುವನ್ನು ಸಂಭ್ರಮಿಸಿದರು.
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…