ಕ್ರೀಡೆ

ಫೈನಲ್ ಟಿ20 ಯಲ್ಲಿ ಆಸ್ಟ್ರೇಲಿಯಾಗೆ ಸೋಲುಣಿಸಿದ ಭಾರತ

ಹೈದರಾಬಾದ್ :  ಟಿ ಟ್ವೆಂಟಿ ಫೈನಲ್ ಪಂದ್ಯದಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ರೋಚಕ ಪಂದ್ಯ ನಡೆದಿದ್ದು ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ರವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಆರು ವಿಕೆಟ್ಗಳ ಭರ್ಜರಿ ಜಯವನ್ನು ಭಾರತ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಗೆ 2-1 ಅಂತರದಲ್ಲಿ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿದೆ.

ಆಸ್ಟ್ರೇಲಿಯ ನೀಡಿದ 187 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೊಹ್ಲಿ ಮತ್ತು ಸೂರ್ಯಕುಮಾರ್ ರವರ ಸ್ಫೋಟಕ ಆಟ ದಿಂದಾಗಿ ಅಂತಿಮ ಓವರ್ ರೋಚಕ ಕ್ಷಣವೇ ಆಗಿತ್ತು ಎನ್ನಬಹುದು. ಅಂತಿಮವಾಗಿ 19.5 ಓವರ್ ಗಳ ಅಂತ್ಯಕ್ಕೆ ಭಾರತ ನಾಕು ವಿಕೆಟ್ ಕಳೆದುಕೊಂಡು 187 ರನ್ಗಳನ್ನು ಬೆನ್ನಟ್ಟುವ ಮೂಲಕ ಗೆಲುವನ್ನು ತಮ್ಮದಾಗಿಸಿಕೊಂಡು ದಾಖಲೆ ಬರೆದಿದೆ.

ದೊಡ್ಡ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೂಡ ಆರಂಭಿಕ ಆಘಾತ ಅನುಭವಿಸಿತು. ರಾಹುಲ್ 1 ರನ್‍ಗೆ ವಿಕೆಟ್ ಕೈಚೆಲ್ಲಿಕೊಂಡರೆ, ರೋಹಿತ್ ಶರ್ಮಾ ಆಟ 17 ರನ್ (14 ಎಸೆತ, 2 ಬೌಂಡರಿ, 1 ಸಿಕ್ಸ್) ಅಂತ್ಯಕಂಡಿತು. 30 ರನ್‍ಗಳಿಗೆ 2ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ಆ ಬಳಿಕ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ನೆರವಾದರು. ಈ ಜೋಡಿ ಆಸ್ಟ್ರೇಲಿಯಾ ಬೌಲರ್‌ಗಳ ಬೆವರಿಳಿಸಿದರು. ಭರ್ಜರಿ ಹೊಡೆತಗಳ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದ ಸೂರ್ಯಕುಮಾರ್ ಯಾದವ್ ಸ್ಫೋಟಕ ಇನ್ನಿಂಗ್ಸ್ 69 ರನ್ (36 ಎಸೆತ, 5 ಬೌಂಡರಿ, 5 ಸಿಕ್ಸ್)ಗೆ ಅಂತ್ಯಕಂಡಿತು. ಈ ಮೊದಲು 3ನೇ ವಿಕೆಟ್‍ಗೆ ಕೊಹ್ಲಿ ಜೊತೆ 104 ರನ್ (62 ಎಸೆತ) ಜೊತೆಯಾಟವಾಡಿದರು.

ಆ ಬಳಿಕ ಬಂದ ಹಾರ್ದಿಕ್ ಪಾಂಡ್ಯ ಕೊಹ್ಲಿ ಜೊತೆ ಗೆಲುವಿಗಾಗಿ ಹೋರಾಡಿದರು. ಅಂತಿಮವಾಗಿ ಕೊಹ್ಲಿ 63 ರನ್ (48 ಎಸೆತ, 3 ಬೌಂಡರಿ, 4 ಸಿಕ್ಸ್) ಚಚ್ಚಿ ಗೆಲುವಿನ ಅಂಚಿನಲ್ಲಿ ವಿಕೆಟ್ ಕಳೆದುಕೊಂಡರು. ಅಂತಿಮವಾಗಿ ಪಾಂಡ್ಯ ಅಜೇಯ 25 ರನ್ (16 ಎಸೆತ, 2 ಬೌಂಡರಿ, 1 ಸಿಕ್ಸ್) ಮತ್ತು ದಿನೇಶ್ ಕಾರ್ತಿಕ್ 1 ರನ್ ಬಾರಿಸಿ ಗೆಲುವನ್ನು ಸಂಭ್ರಮಿಸಿದರು.

andolanait

Recent Posts

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

9 mins ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

1 hour ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

2 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

2 hours ago

400 ಕೋಟಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳ ಹೈಜಾಕ್‌ : ಚೋರ್ಲಾ ಘಾಟ್‌ನಲ್ಲಿ ನಡೆದ ದರೋಡೆ ಬಗ್ಗೆ ಎಸ್‌ಪಿ ಹೇಳಿದ್ದಿಷ್ಟು

ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…

2 hours ago

ಮೂವರು ಕನ್ನಡಿಗರು ಸೇರಿದಂತೆ 45 ಮಂದಿಗೆ ಪದ್ಮಶ್ರೀ ಗೌರವ

ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…

3 hours ago