ಕ್ರೀಡೆ

ಫೈನಲ್ ಟಿ20 ಯಲ್ಲಿ ಆಸ್ಟ್ರೇಲಿಯಾಗೆ ಸೋಲುಣಿಸಿದ ಭಾರತ

ಹೈದರಾಬಾದ್ :  ಟಿ ಟ್ವೆಂಟಿ ಫೈನಲ್ ಪಂದ್ಯದಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ರೋಚಕ ಪಂದ್ಯ ನಡೆದಿದ್ದು ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ರವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಆರು ವಿಕೆಟ್ಗಳ ಭರ್ಜರಿ ಜಯವನ್ನು ಭಾರತ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಗೆ 2-1 ಅಂತರದಲ್ಲಿ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿದೆ.

ಆಸ್ಟ್ರೇಲಿಯ ನೀಡಿದ 187 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೊಹ್ಲಿ ಮತ್ತು ಸೂರ್ಯಕುಮಾರ್ ರವರ ಸ್ಫೋಟಕ ಆಟ ದಿಂದಾಗಿ ಅಂತಿಮ ಓವರ್ ರೋಚಕ ಕ್ಷಣವೇ ಆಗಿತ್ತು ಎನ್ನಬಹುದು. ಅಂತಿಮವಾಗಿ 19.5 ಓವರ್ ಗಳ ಅಂತ್ಯಕ್ಕೆ ಭಾರತ ನಾಕು ವಿಕೆಟ್ ಕಳೆದುಕೊಂಡು 187 ರನ್ಗಳನ್ನು ಬೆನ್ನಟ್ಟುವ ಮೂಲಕ ಗೆಲುವನ್ನು ತಮ್ಮದಾಗಿಸಿಕೊಂಡು ದಾಖಲೆ ಬರೆದಿದೆ.

ದೊಡ್ಡ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೂಡ ಆರಂಭಿಕ ಆಘಾತ ಅನುಭವಿಸಿತು. ರಾಹುಲ್ 1 ರನ್‍ಗೆ ವಿಕೆಟ್ ಕೈಚೆಲ್ಲಿಕೊಂಡರೆ, ರೋಹಿತ್ ಶರ್ಮಾ ಆಟ 17 ರನ್ (14 ಎಸೆತ, 2 ಬೌಂಡರಿ, 1 ಸಿಕ್ಸ್) ಅಂತ್ಯಕಂಡಿತು. 30 ರನ್‍ಗಳಿಗೆ 2ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ಆ ಬಳಿಕ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ನೆರವಾದರು. ಈ ಜೋಡಿ ಆಸ್ಟ್ರೇಲಿಯಾ ಬೌಲರ್‌ಗಳ ಬೆವರಿಳಿಸಿದರು. ಭರ್ಜರಿ ಹೊಡೆತಗಳ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದ ಸೂರ್ಯಕುಮಾರ್ ಯಾದವ್ ಸ್ಫೋಟಕ ಇನ್ನಿಂಗ್ಸ್ 69 ರನ್ (36 ಎಸೆತ, 5 ಬೌಂಡರಿ, 5 ಸಿಕ್ಸ್)ಗೆ ಅಂತ್ಯಕಂಡಿತು. ಈ ಮೊದಲು 3ನೇ ವಿಕೆಟ್‍ಗೆ ಕೊಹ್ಲಿ ಜೊತೆ 104 ರನ್ (62 ಎಸೆತ) ಜೊತೆಯಾಟವಾಡಿದರು.

ಆ ಬಳಿಕ ಬಂದ ಹಾರ್ದಿಕ್ ಪಾಂಡ್ಯ ಕೊಹ್ಲಿ ಜೊತೆ ಗೆಲುವಿಗಾಗಿ ಹೋರಾಡಿದರು. ಅಂತಿಮವಾಗಿ ಕೊಹ್ಲಿ 63 ರನ್ (48 ಎಸೆತ, 3 ಬೌಂಡರಿ, 4 ಸಿಕ್ಸ್) ಚಚ್ಚಿ ಗೆಲುವಿನ ಅಂಚಿನಲ್ಲಿ ವಿಕೆಟ್ ಕಳೆದುಕೊಂಡರು. ಅಂತಿಮವಾಗಿ ಪಾಂಡ್ಯ ಅಜೇಯ 25 ರನ್ (16 ಎಸೆತ, 2 ಬೌಂಡರಿ, 1 ಸಿಕ್ಸ್) ಮತ್ತು ದಿನೇಶ್ ಕಾರ್ತಿಕ್ 1 ರನ್ ಬಾರಿಸಿ ಗೆಲುವನ್ನು ಸಂಭ್ರಮಿಸಿದರು.

andolanait

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

5 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

8 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

11 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

11 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

11 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

11 hours ago