ಕ್ರೀಡೆ

ಫೈನಲ್ ಟಿ20 ಯಲ್ಲಿ ಆಸ್ಟ್ರೇಲಿಯಾಗೆ ಸೋಲುಣಿಸಿದ ಭಾರತ

ಹೈದರಾಬಾದ್ :  ಟಿ ಟ್ವೆಂಟಿ ಫೈನಲ್ ಪಂದ್ಯದಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ರೋಚಕ ಪಂದ್ಯ ನಡೆದಿದ್ದು ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ರವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಆರು ವಿಕೆಟ್ಗಳ ಭರ್ಜರಿ ಜಯವನ್ನು ಭಾರತ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಗೆ 2-1 ಅಂತರದಲ್ಲಿ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿದೆ.

ಆಸ್ಟ್ರೇಲಿಯ ನೀಡಿದ 187 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೊಹ್ಲಿ ಮತ್ತು ಸೂರ್ಯಕುಮಾರ್ ರವರ ಸ್ಫೋಟಕ ಆಟ ದಿಂದಾಗಿ ಅಂತಿಮ ಓವರ್ ರೋಚಕ ಕ್ಷಣವೇ ಆಗಿತ್ತು ಎನ್ನಬಹುದು. ಅಂತಿಮವಾಗಿ 19.5 ಓವರ್ ಗಳ ಅಂತ್ಯಕ್ಕೆ ಭಾರತ ನಾಕು ವಿಕೆಟ್ ಕಳೆದುಕೊಂಡು 187 ರನ್ಗಳನ್ನು ಬೆನ್ನಟ್ಟುವ ಮೂಲಕ ಗೆಲುವನ್ನು ತಮ್ಮದಾಗಿಸಿಕೊಂಡು ದಾಖಲೆ ಬರೆದಿದೆ.

ದೊಡ್ಡ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೂಡ ಆರಂಭಿಕ ಆಘಾತ ಅನುಭವಿಸಿತು. ರಾಹುಲ್ 1 ರನ್‍ಗೆ ವಿಕೆಟ್ ಕೈಚೆಲ್ಲಿಕೊಂಡರೆ, ರೋಹಿತ್ ಶರ್ಮಾ ಆಟ 17 ರನ್ (14 ಎಸೆತ, 2 ಬೌಂಡರಿ, 1 ಸಿಕ್ಸ್) ಅಂತ್ಯಕಂಡಿತು. 30 ರನ್‍ಗಳಿಗೆ 2ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ಆ ಬಳಿಕ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ನೆರವಾದರು. ಈ ಜೋಡಿ ಆಸ್ಟ್ರೇಲಿಯಾ ಬೌಲರ್‌ಗಳ ಬೆವರಿಳಿಸಿದರು. ಭರ್ಜರಿ ಹೊಡೆತಗಳ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದ ಸೂರ್ಯಕುಮಾರ್ ಯಾದವ್ ಸ್ಫೋಟಕ ಇನ್ನಿಂಗ್ಸ್ 69 ರನ್ (36 ಎಸೆತ, 5 ಬೌಂಡರಿ, 5 ಸಿಕ್ಸ್)ಗೆ ಅಂತ್ಯಕಂಡಿತು. ಈ ಮೊದಲು 3ನೇ ವಿಕೆಟ್‍ಗೆ ಕೊಹ್ಲಿ ಜೊತೆ 104 ರನ್ (62 ಎಸೆತ) ಜೊತೆಯಾಟವಾಡಿದರು.

ಆ ಬಳಿಕ ಬಂದ ಹಾರ್ದಿಕ್ ಪಾಂಡ್ಯ ಕೊಹ್ಲಿ ಜೊತೆ ಗೆಲುವಿಗಾಗಿ ಹೋರಾಡಿದರು. ಅಂತಿಮವಾಗಿ ಕೊಹ್ಲಿ 63 ರನ್ (48 ಎಸೆತ, 3 ಬೌಂಡರಿ, 4 ಸಿಕ್ಸ್) ಚಚ್ಚಿ ಗೆಲುವಿನ ಅಂಚಿನಲ್ಲಿ ವಿಕೆಟ್ ಕಳೆದುಕೊಂಡರು. ಅಂತಿಮವಾಗಿ ಪಾಂಡ್ಯ ಅಜೇಯ 25 ರನ್ (16 ಎಸೆತ, 2 ಬೌಂಡರಿ, 1 ಸಿಕ್ಸ್) ಮತ್ತು ದಿನೇಶ್ ಕಾರ್ತಿಕ್ 1 ರನ್ ಬಾರಿಸಿ ಗೆಲುವನ್ನು ಸಂಭ್ರಮಿಸಿದರು.

andolanait

Recent Posts

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ…

14 mins ago

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

48 mins ago

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

2 hours ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

6 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

8 hours ago