ಕ್ರೀಡೆ

ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್‌ ಮಾರ್ಷ್‌ ವಿರುದ್ಧ ಎಫ್‌ಐಆರ್‌

ಉತ್ತರ ಪ್ರದೇಶ : ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಮೇಲೆ ಉತ್ತರ ಪ್ರದೇಶದ ಆಲಿಗಢದಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಆರ್ ಟಿಐ ಕಾರ್ಯಕರ್ತ ಪಂಡಿತ್‌ ಕೇಶವ್‌ ಅವರು ಮಿಚೆಲ್‌ ವಿರುದ್ಧ ದೂರು ದಾಖಲಿಸಿದ್ದು,ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಮಿಚೆಲ್‌ ಮಾರ್ಷ್‌ ಅವರು ಕಾಲಿಟ್ಟು ಕುಳಿತದ್ದು ಭಾರತೀಯ ಕ್ರಿಕೆಟ್‌ ತಂಡದ ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಿದ್ದಾರೆ. ಅದಷ್ಟೇ ಅಲ್ಲದೆ ಮಾರ್ಷ್‌ ಅವರಿಗೆ ನಮ್ಮ ದೇಶದಲ್ಲಿ ಕ್ರಿಕೆಟ್‌ ಆಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದು,ದೂರಿನ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

ನವೆಂಬರ್‌ 19 ರಂದು ನಡೆದ ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು.ವರ್ಲ್ಡ್‌ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್‌ ಮಾರ್ಷ್‌, ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದದ್ದು ಜನರ ಗೆಂಗಣ್ಣಿಗೆ ಗುರಿಯಾಗಿತ್ತು. ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ, ಮಿಚೆಲ್‌ ಅವರ ನಡೆಯನ್ನು ಜನ ತೀವ್ರವಾಗಿ ಖಂಡಿಸಿ, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.

ವೈರಲ್‌ ಆಗಿದ್ದ ಫೋಟೋದಲ್ಲಿ ಮಿಚೆಲ್‌ ಅವರು ಎರಡೂ ಕಾಲುಗಳನ್ನು ವರ್ಲ್ಡ್‌ಕಪ್‌ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು. ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದರು. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್‌ ಅವರು ವರ್ಲ್ಡ್‌ಕಪ್‌ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್‌ ಅವರು ತಮ್ಮ ಪೊಸ್ಟನ್ನು ಡಿಲೀಟ್‌ ಮಾಡಿದ್ದರು.

lokesh

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

8 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

10 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

10 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

10 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

10 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

10 hours ago