ಉತ್ತರ ಪ್ರದೇಶ : ವರ್ಲ್ಡ್ ಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗ ಮಿಚೆಲ್ ಮಾರ್ಷ್ ಮೇಲೆ ಉತ್ತರ ಪ್ರದೇಶದ ಆಲಿಗಢದಲ್ಲಿ ಎಫ್ಐಆರ್ ದಾಖಲಾಗಿದೆ.
ಆರ್ ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ಅವರು ಮಿಚೆಲ್ ವಿರುದ್ಧ ದೂರು ದಾಖಲಿಸಿದ್ದು,ವರ್ಲ್ಡ್ ಕಪ್ ಟ್ರೋಫಿ ಮೇಲೆ ಮಿಚೆಲ್ ಮಾರ್ಷ್ ಅವರು ಕಾಲಿಟ್ಟು ಕುಳಿತದ್ದು ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಿದ್ದಾರೆ. ಅದಷ್ಟೇ ಅಲ್ಲದೆ ಮಾರ್ಷ್ ಅವರಿಗೆ ನಮ್ಮ ದೇಶದಲ್ಲಿ ಕ್ರಿಕೆಟ್ ಆಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದು,ದೂರಿನ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
ನವೆಂಬರ್ 19 ರಂದು ನಡೆದ ವರ್ಲ್ಡ್ ಕಪ್ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು.ವರ್ಲ್ಡ್ ಕಪ್ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್ ಮಾರ್ಷ್, ವರ್ಲ್ಡ್ ಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದದ್ದು ಜನರ ಗೆಂಗಣ್ಣಿಗೆ ಗುರಿಯಾಗಿತ್ತು. ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಮಿಚೆಲ್ ಅವರ ನಡೆಯನ್ನು ಜನ ತೀವ್ರವಾಗಿ ಖಂಡಿಸಿ, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.
ವೈರಲ್ ಆಗಿದ್ದ ಫೋಟೋದಲ್ಲಿ ಮಿಚೆಲ್ ಅವರು ಎರಡೂ ಕಾಲುಗಳನ್ನು ವರ್ಲ್ಡ್ಕಪ್ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು. ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್ ಅವರು ವರ್ಲ್ಡ್ಕಪ್ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್ ಅವರು ತಮ್ಮ ಪೊಸ್ಟನ್ನು ಡಿಲೀಟ್ ಮಾಡಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…