ಕ್ರೀಡೆ

ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್‌ ಮಾರ್ಷ್‌ ವಿರುದ್ಧ ಎಫ್‌ಐಆರ್‌

ಉತ್ತರ ಪ್ರದೇಶ : ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಮೇಲೆ ಉತ್ತರ ಪ್ರದೇಶದ ಆಲಿಗಢದಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಆರ್ ಟಿಐ ಕಾರ್ಯಕರ್ತ ಪಂಡಿತ್‌ ಕೇಶವ್‌ ಅವರು ಮಿಚೆಲ್‌ ವಿರುದ್ಧ ದೂರು ದಾಖಲಿಸಿದ್ದು,ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಮಿಚೆಲ್‌ ಮಾರ್ಷ್‌ ಅವರು ಕಾಲಿಟ್ಟು ಕುಳಿತದ್ದು ಭಾರತೀಯ ಕ್ರಿಕೆಟ್‌ ತಂಡದ ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಿದ್ದಾರೆ. ಅದಷ್ಟೇ ಅಲ್ಲದೆ ಮಾರ್ಷ್‌ ಅವರಿಗೆ ನಮ್ಮ ದೇಶದಲ್ಲಿ ಕ್ರಿಕೆಟ್‌ ಆಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದು,ದೂರಿನ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

ನವೆಂಬರ್‌ 19 ರಂದು ನಡೆದ ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು.ವರ್ಲ್ಡ್‌ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್‌ ಮಾರ್ಷ್‌, ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದದ್ದು ಜನರ ಗೆಂಗಣ್ಣಿಗೆ ಗುರಿಯಾಗಿತ್ತು. ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ, ಮಿಚೆಲ್‌ ಅವರ ನಡೆಯನ್ನು ಜನ ತೀವ್ರವಾಗಿ ಖಂಡಿಸಿ, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.

ವೈರಲ್‌ ಆಗಿದ್ದ ಫೋಟೋದಲ್ಲಿ ಮಿಚೆಲ್‌ ಅವರು ಎರಡೂ ಕಾಲುಗಳನ್ನು ವರ್ಲ್ಡ್‌ಕಪ್‌ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು. ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದರು. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್‌ ಅವರು ವರ್ಲ್ಡ್‌ಕಪ್‌ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್‌ ಅವರು ತಮ್ಮ ಪೊಸ್ಟನ್ನು ಡಿಲೀಟ್‌ ಮಾಡಿದ್ದರು.

lokesh

Recent Posts

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

29 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

2 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

6 hours ago