ಕ್ರೀಡೆ

ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್‌ ಮಾರ್ಷ್‌ ವಿರುದ್ಧ ಎಫ್‌ಐಆರ್‌

ಉತ್ತರ ಪ್ರದೇಶ : ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಮೇಲೆ ಉತ್ತರ ಪ್ರದೇಶದ ಆಲಿಗಢದಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಆರ್ ಟಿಐ ಕಾರ್ಯಕರ್ತ ಪಂಡಿತ್‌ ಕೇಶವ್‌ ಅವರು ಮಿಚೆಲ್‌ ವಿರುದ್ಧ ದೂರು ದಾಖಲಿಸಿದ್ದು,ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಮಿಚೆಲ್‌ ಮಾರ್ಷ್‌ ಅವರು ಕಾಲಿಟ್ಟು ಕುಳಿತದ್ದು ಭಾರತೀಯ ಕ್ರಿಕೆಟ್‌ ತಂಡದ ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಿದ್ದಾರೆ. ಅದಷ್ಟೇ ಅಲ್ಲದೆ ಮಾರ್ಷ್‌ ಅವರಿಗೆ ನಮ್ಮ ದೇಶದಲ್ಲಿ ಕ್ರಿಕೆಟ್‌ ಆಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದು,ದೂರಿನ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

ನವೆಂಬರ್‌ 19 ರಂದು ನಡೆದ ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು.ವರ್ಲ್ಡ್‌ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್‌ ಮಾರ್ಷ್‌, ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದದ್ದು ಜನರ ಗೆಂಗಣ್ಣಿಗೆ ಗುರಿಯಾಗಿತ್ತು. ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ, ಮಿಚೆಲ್‌ ಅವರ ನಡೆಯನ್ನು ಜನ ತೀವ್ರವಾಗಿ ಖಂಡಿಸಿ, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.

ವೈರಲ್‌ ಆಗಿದ್ದ ಫೋಟೋದಲ್ಲಿ ಮಿಚೆಲ್‌ ಅವರು ಎರಡೂ ಕಾಲುಗಳನ್ನು ವರ್ಲ್ಡ್‌ಕಪ್‌ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು. ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದರು. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್‌ ಅವರು ವರ್ಲ್ಡ್‌ಕಪ್‌ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್‌ ಅವರು ತಮ್ಮ ಪೊಸ್ಟನ್ನು ಡಿಲೀಟ್‌ ಮಾಡಿದ್ದರು.

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

5 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

5 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

6 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

15 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

15 hours ago