ಬಾಂಗ್ಲಾದೇಶ: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶದಾದ್ಯಂತ ಅಹಿಂಸೆ ಹೆಚ್ಚಾಗಿದ್ದು, ಪುಂಡರು, ಪ್ರತಿಭಟನಕಾರರ ಅಟ್ಟಹಾಸಕ್ಕೆ ಬಾಂಗ್ಲಾ ಮಾಜಿ ಕ್ರಿಕೇಟಿಗ ಹಾಗೂ ಅವಾಮಿ ಲೀಗ್ ಪಕ್ಷದ ಸಂಸದ ಮಶ್ರಫೆ ಮೊರ್ತಜಾ ಅವರ ಮನೆಗೆ ದಾಳಿ ಮಾಡಿದ್ದಾರೆ.
ಮುಶ್ರಫೆ ಮನೆ ಮೇಲೆ ದಾಳಿ ಮಾಡಿರುವ ಅವರು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಎನ್ಡಿಟಿವಿ ವರದಿ ಮಾಡಿದೆ.
ನರಾಲಿ-೨ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೊರ್ತಜಾ, ಹಸೀನಾ ಅವರ ಕ್ಯಾಬಿನೇಟ್ ಸೇರಿದ್ದರು. ಕ್ರಿಕೆಟ್ನಿಂದ ನಿವೃತ್ತಿಯಾದ ಬಳಿಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು.
ಪ್ರತಿಭಟನೆಯಿಂದ ಮಣಿದ ಬಾಂಗ್ಲಾ ಪ್ರಧಾನಿ ಶೇಖ್ ಅವರು ರಾಜೀನಾಮೆ ನೀಡಿದ ಬಳಿಕವೂ ದೇಶಾದ್ಯಂತ ಹಿಂಸಾಚಾರ ಮುಂದುವರೆದಿದ್ದು, ಅವಾಮಿ ಲೀಗ್ನ ಮುಖಂಡರು, ಕಾರ್ಯಕರ್ತರ ಮೇಲೆ ನಿರಂತರ ದಾಳಿ ಮಾಡುತ್ತಿದ್ದಾರೆ. ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವಾರು ಸಾವು ನೋವುಗಳು ಸಂಭವಿಸಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…