ಮೊಹಾಲಿ : ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ (52 ರನ್, 53 ಎಸೆತ), ಜೋಶ್ ಇಂಗ್ಲಿಸ್(45 ರನ್, 45 ಎಸೆತ)ಹೋರಾಟಕಾರಿ ಇನಿಂಗ್ಸ್ ನೆರವಿನಿಂದ ಆಸ್ಟ್ರೇಲಿಯ ಕ್ರಿಕೆಟ್ ತಂಡ ಭಾರತ ತಂಡಕ್ಕೆ ಮೊದಲ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದ ಗೆಲುವಿಗೆ 277 ರನ್ ನೀಡಿದೆ.
ಶುಕ್ರವಾರ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ನಿಗದಿತ 50 ಓವರ್ ಗಳಲ್ಲಿ 276 ರನ್ ಗಳಿಸಿ ಆಲೌಟಾಗಿದೆ. ವೇಗದ ಬೌಲರ್ ಮುಹಮ್ಮದ್ ಶಮಿ(5-51) ಐದು ವಿಕೆಟ್ ಗೊಂಚಲು ಪಡೆದು ಮಿಂಚಿದರು.
ಆಸ್ಟ್ರೇಲಿಯ ಇನಿಂಗ್ಸ್ ನ ಮೊದಲ ಓವರ್ ನಲ್ಲೇ ಆರಂಭಿಕ ಬ್ಯಾಟರ್ ಮಿಚೆಲ್ ಮಾರ್ಷ್ ವಿಕೆಟನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ವೇಗದ ಬೌಲರ್ ಮುಹಮ್ಮದ್ ಶಮಿ(5-51)ಆಸ್ಟ್ರೇಲಿಯಕ್ಕೆ ಆರಂಭಿಕ ಆಘಾತ ನೀಡಿದರು.
ಆಗ ಎರಡನೇ ವಿಕೆಟ್ ಗೆ 94 ರನ್ ಜೊತೆಯಾಟ ನಡೆಸಿದ ವಾರ್ನರ್ ಹಾಗೂ ಸ್ಟೀವ್ ಸ್ಮಿತ್(41 ರನ್, 60 ಎಸೆತ)ತಂಡವನ್ನು ಆಧರಿಸಿದರು.
ಜೋಶ್ ಇಂಗ್ಲಿಸ್(45 ರನ್, 45 ಎಸೆತ), ಮಾರ್ನಸ್ ಲ್ಯಾಬುಶೇನ್(39 ರನ್, 49 ಎಸೆತ) , ಕ್ಯಾಮರೂನ್ ಗ್ರೀನ್(31 ರನ್, 52 ಎಸೆತ) ಹಾಗೂ ಮಾಕರ್ಸ್ ಸ್ಟೋನಿಸ್(29 ರನ್, 21 ಎಸೆತ) ಎರಡಂಕೆಯ ಸ್ಕೋರ್ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ನಾಯಕ ಪ್ಯಾಟ್ ಕಮಿನ್ಸ್ 9 ಎಸೆತಗಳಲ್ಲಿ 21 ರನ್ ಬಾರಿಸಿ ತಂಡ 277 ರನ್ ಕಲೆಹಾಕುವಲ್ಲಿ ಸಹಾಯಕರಾದರು.
ಭಾರತದ ಬೌಲಿಂಗ್ ನಲ್ಲಿ ಮುಹಮ್ಮದ್ ಶಮಿ(5-51) ಯಶಸ್ವಿ ಪ್ರದರ್ಶನ ನೀಡಿದರೆ, ಜಸ್ಪ್ರಿತ್ ಬುಮ್ರಾ(1-43), ಆರ್.ಅಶ್ವಿನ್(1-47) ಹಾಗೂ ರವೀಂದ್ರ ಜಡೇಜ(1-51) ತಲಾ ಒಂದು ವಿಕೆಟ್ ಪಡೆದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…