ಕ್ರೀಡೆ

ಮೊದಲ ಏಕದಿನ: ಶಮಿ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ, ಭಾರತಕ್ಕೆ 277 ರನ್ ಗುರಿ

ಮೊಹಾಲಿ : ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ (52 ರನ್, 53 ಎಸೆತ), ಜೋಶ್ ಇಂಗ್ಲಿಸ್(45 ರನ್, 45 ಎಸೆತ)ಹೋರಾಟಕಾರಿ ಇನಿಂಗ್ಸ್ ನೆರವಿನಿಂದ ಆಸ್ಟ್ರೇಲಿಯ ಕ್ರಿಕೆಟ್ ತಂಡ ಭಾರತ ತಂಡಕ್ಕೆ ಮೊದಲ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದ ಗೆಲುವಿಗೆ 277 ರನ್ ನೀಡಿದೆ.

ಶುಕ್ರವಾರ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ನಿಗದಿತ 50 ಓವರ್ ಗಳಲ್ಲಿ 276 ರನ್ ಗಳಿಸಿ ಆಲೌಟಾಗಿದೆ. ವೇಗದ ಬೌಲರ್ ಮುಹಮ್ಮದ್ ಶಮಿ(5-51) ಐದು ವಿಕೆಟ್ ಗೊಂಚಲು ಪಡೆದು ಮಿಂಚಿದರು.

ಆಸ್ಟ್ರೇಲಿಯ ಇನಿಂಗ್ಸ್ ನ ಮೊದಲ ಓವರ್ ನಲ್ಲೇ ಆರಂಭಿಕ ಬ್ಯಾಟರ್ ಮಿಚೆಲ್ ಮಾರ್ಷ್ ವಿಕೆಟನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ವೇಗದ ಬೌಲರ್ ಮುಹಮ್ಮದ್ ಶಮಿ(5-51)ಆಸ್ಟ್ರೇಲಿಯಕ್ಕೆ ಆರಂಭಿಕ ಆಘಾತ ನೀಡಿದರು.

ಆಗ ಎರಡನೇ ವಿಕೆಟ್ ಗೆ 94 ರನ್ ಜೊತೆಯಾಟ ನಡೆಸಿದ ವಾರ್ನರ್ ಹಾಗೂ ಸ್ಟೀವ್ ಸ್ಮಿತ್(41 ರನ್, 60 ಎಸೆತ)ತಂಡವನ್ನು ಆಧರಿಸಿದರು.

ಜೋಶ್ ಇಂಗ್ಲಿಸ್(45 ರನ್, 45 ಎಸೆತ), ಮಾರ್ನಸ್ ಲ್ಯಾಬುಶೇನ್(39 ರನ್, 49 ಎಸೆತ) , ಕ್ಯಾಮರೂನ್ ಗ್ರೀನ್(31 ರನ್, 52 ಎಸೆತ) ಹಾಗೂ ಮಾಕರ್ಸ್ ಸ್ಟೋನಿಸ್(29 ರನ್, 21 ಎಸೆತ) ಎರಡಂಕೆಯ ಸ್ಕೋರ್ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ನಾಯಕ  ಪ್ಯಾಟ್‌ ಕಮಿನ್ಸ್‌ 9 ಎಸೆತಗಳಲ್ಲಿ 21 ರನ್‌ ಬಾರಿಸಿ ತಂಡ 277 ರನ್‌ ಕಲೆಹಾಕುವಲ್ಲಿ ಸಹಾಯಕರಾದರು.

ಭಾರತದ ಬೌಲಿಂಗ್ ನಲ್ಲಿ ಮುಹಮ್ಮದ್ ಶಮಿ(5-51) ಯಶಸ್ವಿ ಪ್ರದರ್ಶನ ನೀಡಿದರೆ, ಜಸ್ಪ್ರಿತ್ ಬುಮ್ರಾ(1-43), ಆರ್.ಅಶ್ವಿನ್(1-47) ಹಾಗೂ ರವೀಂದ್ರ ಜಡೇಜ(1-51) ತಲಾ ಒಂದು ವಿಕೆಟ್ ಪಡೆದರು.

andolanait

Recent Posts

ಸರ್ಕಾರಿ ಯೋಜನೆ ಜನರಿಗೆ ತಲುಪಲು ನೌಕರರ ಪಾತ್ರ ಹೆಚ್ಚು : ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ…

11 mins ago

ಎಸ್‌.ಟಿ,ಎಸ್‌.ಟಿ ದೌರ್ಜನ್ಯ ಕಂಡುಬಂದರೆ ಸೂಕ್ತ ಕ್ರಮ : ಜಿಲ್ಲಾಧಿಕಾರಿ

ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ…

17 mins ago

ಮ.ಬೆಟ್ಟದ ಆದಾಯವನ್ನು ಹಳ್ಳಿಗಳ ಅಭಿವೃದ್ಧಿಗೆ ಬಳಸಿ ; ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು…

21 mins ago

6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ : ಸಚಿವ ಬೈರತಿ ಸುರೇಶ್

ಸುವರ್ಣಸೌಧ : ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ…

28 mins ago

ಕಾವೇರಿ,ಕಬಿನಿ ನದಿಗೆ ತ್ಯಾಜ್ಯ : 11 ಸ್ಥಳೀಯ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು,…

49 mins ago

ಕಾರ್ಮಿಕನ ಮೇಲೆ ಕಾಡಾನೆ ದಾಳಿ : ಸ್ಥಳದಲ್ಲೇ ಸಾವು

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ…

1 hour ago