ಕ್ರೀಡೆ

ಮೊದಲ ಏಕದಿನ: ಶಮಿ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ, ಭಾರತಕ್ಕೆ 277 ರನ್ ಗುರಿ

ಮೊಹಾಲಿ : ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ (52 ರನ್, 53 ಎಸೆತ), ಜೋಶ್ ಇಂಗ್ಲಿಸ್(45 ರನ್, 45 ಎಸೆತ)ಹೋರಾಟಕಾರಿ ಇನಿಂಗ್ಸ್ ನೆರವಿನಿಂದ ಆಸ್ಟ್ರೇಲಿಯ ಕ್ರಿಕೆಟ್ ತಂಡ ಭಾರತ ತಂಡಕ್ಕೆ ಮೊದಲ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದ ಗೆಲುವಿಗೆ 277 ರನ್ ನೀಡಿದೆ.

ಶುಕ್ರವಾರ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ನಿಗದಿತ 50 ಓವರ್ ಗಳಲ್ಲಿ 276 ರನ್ ಗಳಿಸಿ ಆಲೌಟಾಗಿದೆ. ವೇಗದ ಬೌಲರ್ ಮುಹಮ್ಮದ್ ಶಮಿ(5-51) ಐದು ವಿಕೆಟ್ ಗೊಂಚಲು ಪಡೆದು ಮಿಂಚಿದರು.

ಆಸ್ಟ್ರೇಲಿಯ ಇನಿಂಗ್ಸ್ ನ ಮೊದಲ ಓವರ್ ನಲ್ಲೇ ಆರಂಭಿಕ ಬ್ಯಾಟರ್ ಮಿಚೆಲ್ ಮಾರ್ಷ್ ವಿಕೆಟನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ವೇಗದ ಬೌಲರ್ ಮುಹಮ್ಮದ್ ಶಮಿ(5-51)ಆಸ್ಟ್ರೇಲಿಯಕ್ಕೆ ಆರಂಭಿಕ ಆಘಾತ ನೀಡಿದರು.

ಆಗ ಎರಡನೇ ವಿಕೆಟ್ ಗೆ 94 ರನ್ ಜೊತೆಯಾಟ ನಡೆಸಿದ ವಾರ್ನರ್ ಹಾಗೂ ಸ್ಟೀವ್ ಸ್ಮಿತ್(41 ರನ್, 60 ಎಸೆತ)ತಂಡವನ್ನು ಆಧರಿಸಿದರು.

ಜೋಶ್ ಇಂಗ್ಲಿಸ್(45 ರನ್, 45 ಎಸೆತ), ಮಾರ್ನಸ್ ಲ್ಯಾಬುಶೇನ್(39 ರನ್, 49 ಎಸೆತ) , ಕ್ಯಾಮರೂನ್ ಗ್ರೀನ್(31 ರನ್, 52 ಎಸೆತ) ಹಾಗೂ ಮಾಕರ್ಸ್ ಸ್ಟೋನಿಸ್(29 ರನ್, 21 ಎಸೆತ) ಎರಡಂಕೆಯ ಸ್ಕೋರ್ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ನಾಯಕ  ಪ್ಯಾಟ್‌ ಕಮಿನ್ಸ್‌ 9 ಎಸೆತಗಳಲ್ಲಿ 21 ರನ್‌ ಬಾರಿಸಿ ತಂಡ 277 ರನ್‌ ಕಲೆಹಾಕುವಲ್ಲಿ ಸಹಾಯಕರಾದರು.

ಭಾರತದ ಬೌಲಿಂಗ್ ನಲ್ಲಿ ಮುಹಮ್ಮದ್ ಶಮಿ(5-51) ಯಶಸ್ವಿ ಪ್ರದರ್ಶನ ನೀಡಿದರೆ, ಜಸ್ಪ್ರಿತ್ ಬುಮ್ರಾ(1-43), ಆರ್.ಅಶ್ವಿನ್(1-47) ಹಾಗೂ ರವೀಂದ್ರ ಜಡೇಜ(1-51) ತಲಾ ಒಂದು ವಿಕೆಟ್ ಪಡೆದರು.

andolanait

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

7 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

7 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

7 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

12 hours ago