ಕ್ರೀಡೆ

ಮೊದಲ ಏಕದಿನ: ಶಮಿ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ, ಭಾರತಕ್ಕೆ 277 ರನ್ ಗುರಿ

ಮೊಹಾಲಿ : ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ (52 ರನ್, 53 ಎಸೆತ), ಜೋಶ್ ಇಂಗ್ಲಿಸ್(45 ರನ್, 45 ಎಸೆತ)ಹೋರಾಟಕಾರಿ ಇನಿಂಗ್ಸ್ ನೆರವಿನಿಂದ ಆಸ್ಟ್ರೇಲಿಯ ಕ್ರಿಕೆಟ್ ತಂಡ ಭಾರತ ತಂಡಕ್ಕೆ ಮೊದಲ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದ ಗೆಲುವಿಗೆ 277 ರನ್ ನೀಡಿದೆ.

ಶುಕ್ರವಾರ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ನಿಗದಿತ 50 ಓವರ್ ಗಳಲ್ಲಿ 276 ರನ್ ಗಳಿಸಿ ಆಲೌಟಾಗಿದೆ. ವೇಗದ ಬೌಲರ್ ಮುಹಮ್ಮದ್ ಶಮಿ(5-51) ಐದು ವಿಕೆಟ್ ಗೊಂಚಲು ಪಡೆದು ಮಿಂಚಿದರು.

ಆಸ್ಟ್ರೇಲಿಯ ಇನಿಂಗ್ಸ್ ನ ಮೊದಲ ಓವರ್ ನಲ್ಲೇ ಆರಂಭಿಕ ಬ್ಯಾಟರ್ ಮಿಚೆಲ್ ಮಾರ್ಷ್ ವಿಕೆಟನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ವೇಗದ ಬೌಲರ್ ಮುಹಮ್ಮದ್ ಶಮಿ(5-51)ಆಸ್ಟ್ರೇಲಿಯಕ್ಕೆ ಆರಂಭಿಕ ಆಘಾತ ನೀಡಿದರು.

ಆಗ ಎರಡನೇ ವಿಕೆಟ್ ಗೆ 94 ರನ್ ಜೊತೆಯಾಟ ನಡೆಸಿದ ವಾರ್ನರ್ ಹಾಗೂ ಸ್ಟೀವ್ ಸ್ಮಿತ್(41 ರನ್, 60 ಎಸೆತ)ತಂಡವನ್ನು ಆಧರಿಸಿದರು.

ಜೋಶ್ ಇಂಗ್ಲಿಸ್(45 ರನ್, 45 ಎಸೆತ), ಮಾರ್ನಸ್ ಲ್ಯಾಬುಶೇನ್(39 ರನ್, 49 ಎಸೆತ) , ಕ್ಯಾಮರೂನ್ ಗ್ರೀನ್(31 ರನ್, 52 ಎಸೆತ) ಹಾಗೂ ಮಾಕರ್ಸ್ ಸ್ಟೋನಿಸ್(29 ರನ್, 21 ಎಸೆತ) ಎರಡಂಕೆಯ ಸ್ಕೋರ್ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ನಾಯಕ  ಪ್ಯಾಟ್‌ ಕಮಿನ್ಸ್‌ 9 ಎಸೆತಗಳಲ್ಲಿ 21 ರನ್‌ ಬಾರಿಸಿ ತಂಡ 277 ರನ್‌ ಕಲೆಹಾಕುವಲ್ಲಿ ಸಹಾಯಕರಾದರು.

ಭಾರತದ ಬೌಲಿಂಗ್ ನಲ್ಲಿ ಮುಹಮ್ಮದ್ ಶಮಿ(5-51) ಯಶಸ್ವಿ ಪ್ರದರ್ಶನ ನೀಡಿದರೆ, ಜಸ್ಪ್ರಿತ್ ಬುಮ್ರಾ(1-43), ಆರ್.ಅಶ್ವಿನ್(1-47) ಹಾಗೂ ರವೀಂದ್ರ ಜಡೇಜ(1-51) ತಲಾ ಒಂದು ವಿಕೆಟ್ ಪಡೆದರು.

andolanait

Recent Posts

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

27 mins ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

2 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

3 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

4 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

4 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

4 hours ago