ಕ್ರೀಡೆ

ಮೊದಲ ಏಕದಿನ: ಶಮಿ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ, ಭಾರತಕ್ಕೆ 277 ರನ್ ಗುರಿ

ಮೊಹಾಲಿ : ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ (52 ರನ್, 53 ಎಸೆತ), ಜೋಶ್ ಇಂಗ್ಲಿಸ್(45 ರನ್, 45 ಎಸೆತ)ಹೋರಾಟಕಾರಿ ಇನಿಂಗ್ಸ್ ನೆರವಿನಿಂದ ಆಸ್ಟ್ರೇಲಿಯ ಕ್ರಿಕೆಟ್ ತಂಡ ಭಾರತ ತಂಡಕ್ಕೆ ಮೊದಲ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದ ಗೆಲುವಿಗೆ 277 ರನ್ ನೀಡಿದೆ.

ಶುಕ್ರವಾರ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ನಿಗದಿತ 50 ಓವರ್ ಗಳಲ್ಲಿ 276 ರನ್ ಗಳಿಸಿ ಆಲೌಟಾಗಿದೆ. ವೇಗದ ಬೌಲರ್ ಮುಹಮ್ಮದ್ ಶಮಿ(5-51) ಐದು ವಿಕೆಟ್ ಗೊಂಚಲು ಪಡೆದು ಮಿಂಚಿದರು.

ಆಸ್ಟ್ರೇಲಿಯ ಇನಿಂಗ್ಸ್ ನ ಮೊದಲ ಓವರ್ ನಲ್ಲೇ ಆರಂಭಿಕ ಬ್ಯಾಟರ್ ಮಿಚೆಲ್ ಮಾರ್ಷ್ ವಿಕೆಟನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ವೇಗದ ಬೌಲರ್ ಮುಹಮ್ಮದ್ ಶಮಿ(5-51)ಆಸ್ಟ್ರೇಲಿಯಕ್ಕೆ ಆರಂಭಿಕ ಆಘಾತ ನೀಡಿದರು.

ಆಗ ಎರಡನೇ ವಿಕೆಟ್ ಗೆ 94 ರನ್ ಜೊತೆಯಾಟ ನಡೆಸಿದ ವಾರ್ನರ್ ಹಾಗೂ ಸ್ಟೀವ್ ಸ್ಮಿತ್(41 ರನ್, 60 ಎಸೆತ)ತಂಡವನ್ನು ಆಧರಿಸಿದರು.

ಜೋಶ್ ಇಂಗ್ಲಿಸ್(45 ರನ್, 45 ಎಸೆತ), ಮಾರ್ನಸ್ ಲ್ಯಾಬುಶೇನ್(39 ರನ್, 49 ಎಸೆತ) , ಕ್ಯಾಮರೂನ್ ಗ್ರೀನ್(31 ರನ್, 52 ಎಸೆತ) ಹಾಗೂ ಮಾಕರ್ಸ್ ಸ್ಟೋನಿಸ್(29 ರನ್, 21 ಎಸೆತ) ಎರಡಂಕೆಯ ಸ್ಕೋರ್ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ನಾಯಕ  ಪ್ಯಾಟ್‌ ಕಮಿನ್ಸ್‌ 9 ಎಸೆತಗಳಲ್ಲಿ 21 ರನ್‌ ಬಾರಿಸಿ ತಂಡ 277 ರನ್‌ ಕಲೆಹಾಕುವಲ್ಲಿ ಸಹಾಯಕರಾದರು.

ಭಾರತದ ಬೌಲಿಂಗ್ ನಲ್ಲಿ ಮುಹಮ್ಮದ್ ಶಮಿ(5-51) ಯಶಸ್ವಿ ಪ್ರದರ್ಶನ ನೀಡಿದರೆ, ಜಸ್ಪ್ರಿತ್ ಬುಮ್ರಾ(1-43), ಆರ್.ಅಶ್ವಿನ್(1-47) ಹಾಗೂ ರವೀಂದ್ರ ಜಡೇಜ(1-51) ತಲಾ ಒಂದು ವಿಕೆಟ್ ಪಡೆದರು.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

20 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago