ಕ್ರೀಡೆ

ಮೊದಲ ಟಿ20: ಡಕ್‌ವರ್ತ್-ಲೂಯಿಸ್ ನಿಯಮದಂತೆ ಭಾರತಕ್ಕೆ 2 ರನ್ ಜಯ

ಡಬ್ಲಿನ್ : ಐರ್‌ಲ್ಯಾಂಡ್ ವಿರುದ್ಧದ ಟ್ವೆಂಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಶುಕ್ರವಾರ ಡಕ್‌ವರ್ತ್-ಲೂಯಿಸ್ ನಿಯಮದಂತೆ 2 ರನ್‌ಗಳಿಂದ ಗೆದ್ದಿದೆ.

ಗೆಲ್ಲಲು ಪ್ರವಾಸಿ ಭಾರತಕ್ಕೆ ಆತಿಥೇಯ ಐರ್‌ಲ್ಯಾಂಡ್ ಶುಕ್ರವಾರ 140 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಗುರಿಯನ್ನು ಬೆನ್ನತ್ತಿದ ಭಾರತ 6.5 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 47 ರನ್‌ಗಳನ್ನು ಗಳಿಸಿತು.

ಆಗ ಭಾರೀ ಮಳೆ ಸುರಿಯಲು ಆರಂಭಿಸಿತು. ಒಮ್ಮೆ ಆರಂಭವಾದ ಮಳೆ ನಿರಂತರವಾಗಿ ಮುಂದುವರಿಯಿತು. ಮಳೆ ನಿಲ್ಲುವ ಸೂಚನೆಗಳು ಕಾಣದಿದ್ದಾಗ ಡಕ್‌ವರ್ತ್-ಲೂಯಿಸ್ ನಿಯಮದಂತೆ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಯಿತು.

ಈ ನಿಯಮದಂತೆ ಭಾರತ 6.5 ಓವರ್‌ಗಳಲ್ಲಿ 46 ರನ್ ಮಾಡಬೇಕಾಗಿತ್ತು. ಭಾರತ ಆಗಲೇ 47 ರನ್‌ಗಳನ್ನು ಗಳಿಸಿತ್ತು. ಆಗ ಭಾರತವನ್ನು 2 ರನ್‌ಗಳಿಂದ ಗೆದ್ದಿದೆ ಎಂದು ಘೋಷಿಸಲಾಯಿತು.

ಭಾರತದ ಪರವಾಗಿ ಯಶಸ್ವಿ ಜೈಸ್ವಾಲ್ 23 ಎಸೆತಗಳಲ್ಲಿ 24 ರನ್ ಗಳಿಸಿದರೆ, ಋತುರಾಜ್ ಗಾಯಕ್‌ವಾಡ್ 16 ಎಸೆತಗಳಲ್ಲಿ 19 ರನ್ ಸಿಡಿಸಿ ಔಟಾಗದೆ ಉಳಿದರು. ಸಂಜು ಸ್ಯಾಮ್ಸನ್ 1 ರನ್ ಗಳಿಸಿ ಔಟಾಗದೆ ಉಳಿದರು.

ಐರ್‌ಲ್ಯಾಂಡ್‌ನ ಕ್ರೇಗ್ ಯಂಗ್ 5 ಎಸೆತಗಳಲ್ಲಿ 2 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಉರುಳಿಸಿದರು.

ಜಸ್ಪ್ರೀತ್ ಬುಮ್ರಾರನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು.

ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಮೊದಲು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು.

ಐರ್‌ಲ್ಯಾಂಡ್ ಬಾರಿ ಮೆಕಾರ್ತಿ ಬಾರಿಸಿದ ಅರ್ಧ ಶತಕ (51)ದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 139 ರನ್‌ಗಳನ್ನು ಗಳಿಸಿತು.

ರವಿ ಬಿಷ್ಣೋಯ್ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್‌ಗಳನ್ನು ಉರುಳಿಸಿ ಎದುರಾಳಿ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿದರು.

ಐರ್‌ಲ್ಯಾಂಡ್‌ನ ಕ್ಯಾಂಫರ್ 33 ಎಸೆತಗಳಲ್ಲಿ 39 ರನ್‌ಗಳನ್ನು ಗಳಿಸಿದರೆ, ಮೆಕಾರ್ತಿ 33 ಎಸೆತಗಳಲ್ಲಿ 51 ರನ್‌ಗಳನ್ನು ಸಿಡಿಸಿ ಅಜೇಯರಾಗಿ ಉಳಿದರು.

ಈ ನಡುವೆ ಮಾರ್ಕ್ ಅಡೇರ್ 16 ಎಸೆತಗಳಲ್ಲಿ 16 ರನ್‌ಗಳನ್ನು ಮಾಡಿ ತಂಡಕ್ಕೆ ಅಮೂಲ್ಯ ದೇಣಿಗೆ ನೀಡಿದರು.

ಬುಮ್ರಾ 4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಪಡೆದು 24 ರನ್ ನೀಡಿದರೆ, ಬಿಷ್ಣೋಯ್ 23 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಪಡೆದರು.

ಚೊಚ್ಚಲ ಅಂತರ್‌ರಾಷ್ಟ್ರೀಯ ಟಿ20 ಪಂದ್ಯವಾಡಿದ ಪ್ರಸಿದ್ಧ ಕೃಷ್ಣ 4 ಓವರ್‌ಗಳಲ್ಲಿ 32 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಗಳಿಸಿದರು.

andolanait

Recent Posts

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

6 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

3 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

3 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

3 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

4 hours ago