ಕ್ರೀಡೆ

ಮೊದಲ ಟಿ20: ಡಕ್‌ವರ್ತ್-ಲೂಯಿಸ್ ನಿಯಮದಂತೆ ಭಾರತಕ್ಕೆ 2 ರನ್ ಜಯ

ಡಬ್ಲಿನ್ : ಐರ್‌ಲ್ಯಾಂಡ್ ವಿರುದ್ಧದ ಟ್ವೆಂಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಶುಕ್ರವಾರ ಡಕ್‌ವರ್ತ್-ಲೂಯಿಸ್ ನಿಯಮದಂತೆ 2 ರನ್‌ಗಳಿಂದ ಗೆದ್ದಿದೆ.

ಗೆಲ್ಲಲು ಪ್ರವಾಸಿ ಭಾರತಕ್ಕೆ ಆತಿಥೇಯ ಐರ್‌ಲ್ಯಾಂಡ್ ಶುಕ್ರವಾರ 140 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಗುರಿಯನ್ನು ಬೆನ್ನತ್ತಿದ ಭಾರತ 6.5 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 47 ರನ್‌ಗಳನ್ನು ಗಳಿಸಿತು.

ಆಗ ಭಾರೀ ಮಳೆ ಸುರಿಯಲು ಆರಂಭಿಸಿತು. ಒಮ್ಮೆ ಆರಂಭವಾದ ಮಳೆ ನಿರಂತರವಾಗಿ ಮುಂದುವರಿಯಿತು. ಮಳೆ ನಿಲ್ಲುವ ಸೂಚನೆಗಳು ಕಾಣದಿದ್ದಾಗ ಡಕ್‌ವರ್ತ್-ಲೂಯಿಸ್ ನಿಯಮದಂತೆ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಯಿತು.

ಈ ನಿಯಮದಂತೆ ಭಾರತ 6.5 ಓವರ್‌ಗಳಲ್ಲಿ 46 ರನ್ ಮಾಡಬೇಕಾಗಿತ್ತು. ಭಾರತ ಆಗಲೇ 47 ರನ್‌ಗಳನ್ನು ಗಳಿಸಿತ್ತು. ಆಗ ಭಾರತವನ್ನು 2 ರನ್‌ಗಳಿಂದ ಗೆದ್ದಿದೆ ಎಂದು ಘೋಷಿಸಲಾಯಿತು.

ಭಾರತದ ಪರವಾಗಿ ಯಶಸ್ವಿ ಜೈಸ್ವಾಲ್ 23 ಎಸೆತಗಳಲ್ಲಿ 24 ರನ್ ಗಳಿಸಿದರೆ, ಋತುರಾಜ್ ಗಾಯಕ್‌ವಾಡ್ 16 ಎಸೆತಗಳಲ್ಲಿ 19 ರನ್ ಸಿಡಿಸಿ ಔಟಾಗದೆ ಉಳಿದರು. ಸಂಜು ಸ್ಯಾಮ್ಸನ್ 1 ರನ್ ಗಳಿಸಿ ಔಟಾಗದೆ ಉಳಿದರು.

ಐರ್‌ಲ್ಯಾಂಡ್‌ನ ಕ್ರೇಗ್ ಯಂಗ್ 5 ಎಸೆತಗಳಲ್ಲಿ 2 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಉರುಳಿಸಿದರು.

ಜಸ್ಪ್ರೀತ್ ಬುಮ್ರಾರನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು.

ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಮೊದಲು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು.

ಐರ್‌ಲ್ಯಾಂಡ್ ಬಾರಿ ಮೆಕಾರ್ತಿ ಬಾರಿಸಿದ ಅರ್ಧ ಶತಕ (51)ದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 139 ರನ್‌ಗಳನ್ನು ಗಳಿಸಿತು.

ರವಿ ಬಿಷ್ಣೋಯ್ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್‌ಗಳನ್ನು ಉರುಳಿಸಿ ಎದುರಾಳಿ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿದರು.

ಐರ್‌ಲ್ಯಾಂಡ್‌ನ ಕ್ಯಾಂಫರ್ 33 ಎಸೆತಗಳಲ್ಲಿ 39 ರನ್‌ಗಳನ್ನು ಗಳಿಸಿದರೆ, ಮೆಕಾರ್ತಿ 33 ಎಸೆತಗಳಲ್ಲಿ 51 ರನ್‌ಗಳನ್ನು ಸಿಡಿಸಿ ಅಜೇಯರಾಗಿ ಉಳಿದರು.

ಈ ನಡುವೆ ಮಾರ್ಕ್ ಅಡೇರ್ 16 ಎಸೆತಗಳಲ್ಲಿ 16 ರನ್‌ಗಳನ್ನು ಮಾಡಿ ತಂಡಕ್ಕೆ ಅಮೂಲ್ಯ ದೇಣಿಗೆ ನೀಡಿದರು.

ಬುಮ್ರಾ 4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಪಡೆದು 24 ರನ್ ನೀಡಿದರೆ, ಬಿಷ್ಣೋಯ್ 23 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಪಡೆದರು.

ಚೊಚ್ಚಲ ಅಂತರ್‌ರಾಷ್ಟ್ರೀಯ ಟಿ20 ಪಂದ್ಯವಾಡಿದ ಪ್ರಸಿದ್ಧ ಕೃಷ್ಣ 4 ಓವರ್‌ಗಳಲ್ಲಿ 32 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಗಳಿಸಿದರು.

andolanait

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

9 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

9 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

10 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

10 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

10 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

10 hours ago