ಕ್ರೀಡೆ

ಮೊದಲ ಟಿ20: ಡಕ್‌ವರ್ತ್-ಲೂಯಿಸ್ ನಿಯಮದಂತೆ ಭಾರತಕ್ಕೆ 2 ರನ್ ಜಯ

ಡಬ್ಲಿನ್ : ಐರ್‌ಲ್ಯಾಂಡ್ ವಿರುದ್ಧದ ಟ್ವೆಂಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಶುಕ್ರವಾರ ಡಕ್‌ವರ್ತ್-ಲೂಯಿಸ್ ನಿಯಮದಂತೆ 2 ರನ್‌ಗಳಿಂದ ಗೆದ್ದಿದೆ.

ಗೆಲ್ಲಲು ಪ್ರವಾಸಿ ಭಾರತಕ್ಕೆ ಆತಿಥೇಯ ಐರ್‌ಲ್ಯಾಂಡ್ ಶುಕ್ರವಾರ 140 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಗುರಿಯನ್ನು ಬೆನ್ನತ್ತಿದ ಭಾರತ 6.5 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 47 ರನ್‌ಗಳನ್ನು ಗಳಿಸಿತು.

ಆಗ ಭಾರೀ ಮಳೆ ಸುರಿಯಲು ಆರಂಭಿಸಿತು. ಒಮ್ಮೆ ಆರಂಭವಾದ ಮಳೆ ನಿರಂತರವಾಗಿ ಮುಂದುವರಿಯಿತು. ಮಳೆ ನಿಲ್ಲುವ ಸೂಚನೆಗಳು ಕಾಣದಿದ್ದಾಗ ಡಕ್‌ವರ್ತ್-ಲೂಯಿಸ್ ನಿಯಮದಂತೆ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಯಿತು.

ಈ ನಿಯಮದಂತೆ ಭಾರತ 6.5 ಓವರ್‌ಗಳಲ್ಲಿ 46 ರನ್ ಮಾಡಬೇಕಾಗಿತ್ತು. ಭಾರತ ಆಗಲೇ 47 ರನ್‌ಗಳನ್ನು ಗಳಿಸಿತ್ತು. ಆಗ ಭಾರತವನ್ನು 2 ರನ್‌ಗಳಿಂದ ಗೆದ್ದಿದೆ ಎಂದು ಘೋಷಿಸಲಾಯಿತು.

ಭಾರತದ ಪರವಾಗಿ ಯಶಸ್ವಿ ಜೈಸ್ವಾಲ್ 23 ಎಸೆತಗಳಲ್ಲಿ 24 ರನ್ ಗಳಿಸಿದರೆ, ಋತುರಾಜ್ ಗಾಯಕ್‌ವಾಡ್ 16 ಎಸೆತಗಳಲ್ಲಿ 19 ರನ್ ಸಿಡಿಸಿ ಔಟಾಗದೆ ಉಳಿದರು. ಸಂಜು ಸ್ಯಾಮ್ಸನ್ 1 ರನ್ ಗಳಿಸಿ ಔಟಾಗದೆ ಉಳಿದರು.

ಐರ್‌ಲ್ಯಾಂಡ್‌ನ ಕ್ರೇಗ್ ಯಂಗ್ 5 ಎಸೆತಗಳಲ್ಲಿ 2 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಉರುಳಿಸಿದರು.

ಜಸ್ಪ್ರೀತ್ ಬುಮ್ರಾರನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು.

ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಮೊದಲು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು.

ಐರ್‌ಲ್ಯಾಂಡ್ ಬಾರಿ ಮೆಕಾರ್ತಿ ಬಾರಿಸಿದ ಅರ್ಧ ಶತಕ (51)ದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 139 ರನ್‌ಗಳನ್ನು ಗಳಿಸಿತು.

ರವಿ ಬಿಷ್ಣೋಯ್ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್‌ಗಳನ್ನು ಉರುಳಿಸಿ ಎದುರಾಳಿ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿದರು.

ಐರ್‌ಲ್ಯಾಂಡ್‌ನ ಕ್ಯಾಂಫರ್ 33 ಎಸೆತಗಳಲ್ಲಿ 39 ರನ್‌ಗಳನ್ನು ಗಳಿಸಿದರೆ, ಮೆಕಾರ್ತಿ 33 ಎಸೆತಗಳಲ್ಲಿ 51 ರನ್‌ಗಳನ್ನು ಸಿಡಿಸಿ ಅಜೇಯರಾಗಿ ಉಳಿದರು.

ಈ ನಡುವೆ ಮಾರ್ಕ್ ಅಡೇರ್ 16 ಎಸೆತಗಳಲ್ಲಿ 16 ರನ್‌ಗಳನ್ನು ಮಾಡಿ ತಂಡಕ್ಕೆ ಅಮೂಲ್ಯ ದೇಣಿಗೆ ನೀಡಿದರು.

ಬುಮ್ರಾ 4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಪಡೆದು 24 ರನ್ ನೀಡಿದರೆ, ಬಿಷ್ಣೋಯ್ 23 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಪಡೆದರು.

ಚೊಚ್ಚಲ ಅಂತರ್‌ರಾಷ್ಟ್ರೀಯ ಟಿ20 ಪಂದ್ಯವಾಡಿದ ಪ್ರಸಿದ್ಧ ಕೃಷ್ಣ 4 ಓವರ್‌ಗಳಲ್ಲಿ 32 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಗಳಿಸಿದರು.

andolanait

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

1 hour ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

1 hour ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

1 hour ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

2 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

14 hours ago