ಕ್ರೀಡೆ

ಮೊದಲ ಟಿ20: ಡಕ್‌ವರ್ತ್-ಲೂಯಿಸ್ ನಿಯಮದಂತೆ ಭಾರತಕ್ಕೆ 2 ರನ್ ಜಯ

ಡಬ್ಲಿನ್ : ಐರ್‌ಲ್ಯಾಂಡ್ ವಿರುದ್ಧದ ಟ್ವೆಂಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಶುಕ್ರವಾರ ಡಕ್‌ವರ್ತ್-ಲೂಯಿಸ್ ನಿಯಮದಂತೆ 2 ರನ್‌ಗಳಿಂದ ಗೆದ್ದಿದೆ.

ಗೆಲ್ಲಲು ಪ್ರವಾಸಿ ಭಾರತಕ್ಕೆ ಆತಿಥೇಯ ಐರ್‌ಲ್ಯಾಂಡ್ ಶುಕ್ರವಾರ 140 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಗುರಿಯನ್ನು ಬೆನ್ನತ್ತಿದ ಭಾರತ 6.5 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 47 ರನ್‌ಗಳನ್ನು ಗಳಿಸಿತು.

ಆಗ ಭಾರೀ ಮಳೆ ಸುರಿಯಲು ಆರಂಭಿಸಿತು. ಒಮ್ಮೆ ಆರಂಭವಾದ ಮಳೆ ನಿರಂತರವಾಗಿ ಮುಂದುವರಿಯಿತು. ಮಳೆ ನಿಲ್ಲುವ ಸೂಚನೆಗಳು ಕಾಣದಿದ್ದಾಗ ಡಕ್‌ವರ್ತ್-ಲೂಯಿಸ್ ನಿಯಮದಂತೆ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಯಿತು.

ಈ ನಿಯಮದಂತೆ ಭಾರತ 6.5 ಓವರ್‌ಗಳಲ್ಲಿ 46 ರನ್ ಮಾಡಬೇಕಾಗಿತ್ತು. ಭಾರತ ಆಗಲೇ 47 ರನ್‌ಗಳನ್ನು ಗಳಿಸಿತ್ತು. ಆಗ ಭಾರತವನ್ನು 2 ರನ್‌ಗಳಿಂದ ಗೆದ್ದಿದೆ ಎಂದು ಘೋಷಿಸಲಾಯಿತು.

ಭಾರತದ ಪರವಾಗಿ ಯಶಸ್ವಿ ಜೈಸ್ವಾಲ್ 23 ಎಸೆತಗಳಲ್ಲಿ 24 ರನ್ ಗಳಿಸಿದರೆ, ಋತುರಾಜ್ ಗಾಯಕ್‌ವಾಡ್ 16 ಎಸೆತಗಳಲ್ಲಿ 19 ರನ್ ಸಿಡಿಸಿ ಔಟಾಗದೆ ಉಳಿದರು. ಸಂಜು ಸ್ಯಾಮ್ಸನ್ 1 ರನ್ ಗಳಿಸಿ ಔಟಾಗದೆ ಉಳಿದರು.

ಐರ್‌ಲ್ಯಾಂಡ್‌ನ ಕ್ರೇಗ್ ಯಂಗ್ 5 ಎಸೆತಗಳಲ್ಲಿ 2 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಉರುಳಿಸಿದರು.

ಜಸ್ಪ್ರೀತ್ ಬುಮ್ರಾರನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು.

ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಮೊದಲು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು.

ಐರ್‌ಲ್ಯಾಂಡ್ ಬಾರಿ ಮೆಕಾರ್ತಿ ಬಾರಿಸಿದ ಅರ್ಧ ಶತಕ (51)ದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 139 ರನ್‌ಗಳನ್ನು ಗಳಿಸಿತು.

ರವಿ ಬಿಷ್ಣೋಯ್ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್‌ಗಳನ್ನು ಉರುಳಿಸಿ ಎದುರಾಳಿ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿದರು.

ಐರ್‌ಲ್ಯಾಂಡ್‌ನ ಕ್ಯಾಂಫರ್ 33 ಎಸೆತಗಳಲ್ಲಿ 39 ರನ್‌ಗಳನ್ನು ಗಳಿಸಿದರೆ, ಮೆಕಾರ್ತಿ 33 ಎಸೆತಗಳಲ್ಲಿ 51 ರನ್‌ಗಳನ್ನು ಸಿಡಿಸಿ ಅಜೇಯರಾಗಿ ಉಳಿದರು.

ಈ ನಡುವೆ ಮಾರ್ಕ್ ಅಡೇರ್ 16 ಎಸೆತಗಳಲ್ಲಿ 16 ರನ್‌ಗಳನ್ನು ಮಾಡಿ ತಂಡಕ್ಕೆ ಅಮೂಲ್ಯ ದೇಣಿಗೆ ನೀಡಿದರು.

ಬುಮ್ರಾ 4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಪಡೆದು 24 ರನ್ ನೀಡಿದರೆ, ಬಿಷ್ಣೋಯ್ 23 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಪಡೆದರು.

ಚೊಚ್ಚಲ ಅಂತರ್‌ರಾಷ್ಟ್ರೀಯ ಟಿ20 ಪಂದ್ಯವಾಡಿದ ಪ್ರಸಿದ್ಧ ಕೃಷ್ಣ 4 ಓವರ್‌ಗಳಲ್ಲಿ 32 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಗಳಿಸಿದರು.

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

3 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

6 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

6 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

7 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

11 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

11 hours ago