ಕ್ರೀಡೆ

ಮೊದಲ ಟಿ20: ಡಕ್‌ವರ್ತ್-ಲೂಯಿಸ್ ನಿಯಮದಂತೆ ಭಾರತಕ್ಕೆ 2 ರನ್ ಜಯ

ಡಬ್ಲಿನ್ : ಐರ್‌ಲ್ಯಾಂಡ್ ವಿರುದ್ಧದ ಟ್ವೆಂಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಶುಕ್ರವಾರ ಡಕ್‌ವರ್ತ್-ಲೂಯಿಸ್ ನಿಯಮದಂತೆ 2 ರನ್‌ಗಳಿಂದ ಗೆದ್ದಿದೆ.

ಗೆಲ್ಲಲು ಪ್ರವಾಸಿ ಭಾರತಕ್ಕೆ ಆತಿಥೇಯ ಐರ್‌ಲ್ಯಾಂಡ್ ಶುಕ್ರವಾರ 140 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಗುರಿಯನ್ನು ಬೆನ್ನತ್ತಿದ ಭಾರತ 6.5 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 47 ರನ್‌ಗಳನ್ನು ಗಳಿಸಿತು.

ಆಗ ಭಾರೀ ಮಳೆ ಸುರಿಯಲು ಆರಂಭಿಸಿತು. ಒಮ್ಮೆ ಆರಂಭವಾದ ಮಳೆ ನಿರಂತರವಾಗಿ ಮುಂದುವರಿಯಿತು. ಮಳೆ ನಿಲ್ಲುವ ಸೂಚನೆಗಳು ಕಾಣದಿದ್ದಾಗ ಡಕ್‌ವರ್ತ್-ಲೂಯಿಸ್ ನಿಯಮದಂತೆ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಯಿತು.

ಈ ನಿಯಮದಂತೆ ಭಾರತ 6.5 ಓವರ್‌ಗಳಲ್ಲಿ 46 ರನ್ ಮಾಡಬೇಕಾಗಿತ್ತು. ಭಾರತ ಆಗಲೇ 47 ರನ್‌ಗಳನ್ನು ಗಳಿಸಿತ್ತು. ಆಗ ಭಾರತವನ್ನು 2 ರನ್‌ಗಳಿಂದ ಗೆದ್ದಿದೆ ಎಂದು ಘೋಷಿಸಲಾಯಿತು.

ಭಾರತದ ಪರವಾಗಿ ಯಶಸ್ವಿ ಜೈಸ್ವಾಲ್ 23 ಎಸೆತಗಳಲ್ಲಿ 24 ರನ್ ಗಳಿಸಿದರೆ, ಋತುರಾಜ್ ಗಾಯಕ್‌ವಾಡ್ 16 ಎಸೆತಗಳಲ್ಲಿ 19 ರನ್ ಸಿಡಿಸಿ ಔಟಾಗದೆ ಉಳಿದರು. ಸಂಜು ಸ್ಯಾಮ್ಸನ್ 1 ರನ್ ಗಳಿಸಿ ಔಟಾಗದೆ ಉಳಿದರು.

ಐರ್‌ಲ್ಯಾಂಡ್‌ನ ಕ್ರೇಗ್ ಯಂಗ್ 5 ಎಸೆತಗಳಲ್ಲಿ 2 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಉರುಳಿಸಿದರು.

ಜಸ್ಪ್ರೀತ್ ಬುಮ್ರಾರನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು.

ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಮೊದಲು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು.

ಐರ್‌ಲ್ಯಾಂಡ್ ಬಾರಿ ಮೆಕಾರ್ತಿ ಬಾರಿಸಿದ ಅರ್ಧ ಶತಕ (51)ದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 139 ರನ್‌ಗಳನ್ನು ಗಳಿಸಿತು.

ರವಿ ಬಿಷ್ಣೋಯ್ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್‌ಗಳನ್ನು ಉರುಳಿಸಿ ಎದುರಾಳಿ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿದರು.

ಐರ್‌ಲ್ಯಾಂಡ್‌ನ ಕ್ಯಾಂಫರ್ 33 ಎಸೆತಗಳಲ್ಲಿ 39 ರನ್‌ಗಳನ್ನು ಗಳಿಸಿದರೆ, ಮೆಕಾರ್ತಿ 33 ಎಸೆತಗಳಲ್ಲಿ 51 ರನ್‌ಗಳನ್ನು ಸಿಡಿಸಿ ಅಜೇಯರಾಗಿ ಉಳಿದರು.

ಈ ನಡುವೆ ಮಾರ್ಕ್ ಅಡೇರ್ 16 ಎಸೆತಗಳಲ್ಲಿ 16 ರನ್‌ಗಳನ್ನು ಮಾಡಿ ತಂಡಕ್ಕೆ ಅಮೂಲ್ಯ ದೇಣಿಗೆ ನೀಡಿದರು.

ಬುಮ್ರಾ 4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಪಡೆದು 24 ರನ್ ನೀಡಿದರೆ, ಬಿಷ್ಣೋಯ್ 23 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಪಡೆದರು.

ಚೊಚ್ಚಲ ಅಂತರ್‌ರಾಷ್ಟ್ರೀಯ ಟಿ20 ಪಂದ್ಯವಾಡಿದ ಪ್ರಸಿದ್ಧ ಕೃಷ್ಣ 4 ಓವರ್‌ಗಳಲ್ಲಿ 32 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಗಳಿಸಿದರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

9 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

10 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

11 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

16 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

23 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

23 hours ago