ಮುಂಬೈ: ಆಸೀಸ್ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ವನಿತೆಯರ ತಂಡ ೮ ವಿಕೆಟ್ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಬ್ಯಾಟಿಂಗ್ ಮತು ಬೌಲಿಂಗ್ ಎರಡರಲ್ಲೂ ಪ್ರಾಬಲ್ಯ ಸಾಧಿಸಿದ ಟೀಂ ಇಂಡಿಯಾ ತಂಡ ತನ್ನ ತವರು ನೆಲದಲ್ಲಿ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾಗಿದ್ದಾರೆ.
ಶನಿವಾರದ ಅಂತಿಮ ದಿನದಾಟಕ್ಕೆ ಆಸೀಸ್ ೫ ವಿಕೆಟ್ ಕಳೆದುಕೊಂಡು ೨೩೩ ರನ್ ಕಲೆಹಾಕಿ ೪೭ರನ್ ಮುನ್ನಡೆಯೊಂದಿಗೆ ಇಂದು (ಭಾನುವಾರ) ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ ಕೇವಲ ೨೮ ರನ್ ಗಳಿಸಿ ಉಳಿದ ೫ ವಿಕೆಟ್ಗಳನ್ನು ಕಳೆದುಕೊಂಡು ಭಾರತಕ್ಕೆ ೭೫ ರನ್ಗಳ ಗುರಿ ನೀಡಿತು.
ಅಂತಿಮ ದಿನದಾಟದಲ್ಲಿ ಆಕ್ರಮಣಕಾರಿ ದಾಳಿ ಮಾಡಿದ ಭಾರತ ತಂಡದ ಸ್ಪನ್ನರ್ಸ್ಗಳಾದ ಸ್ನೇಹಾ ರಾಣಾ, ರಾಜೇಶ್ವರಿ ಗಾಯಕ್ವಾಡ್, ದೀಪ್ತಿ ಶರ್ಮಾ ಆಸೀಸ್ ಪಡೆಯನ್ನು ಧೂಳಿಪಟ ಮಾಡಿದರು.
ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡ ಕೇವಲ ೨ ವಿಕೆಟ್ ಕಳೆದುಕೊಂಡು ಐತಿಹಾಸಿಕ ಗೆಲುವು ದಾಖಲಿಸಿತು. ಸ್ಮೃತಿ ಮಂದಾನ ೩೮*, ಜೆಮಿಯಾ ರಾಡ್ರಿಗಸ್ ೧೨ ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಈ ವರೆಗೆ ೪೦ ಟೆಸ್ಟ್ ಪಂದ್ಯಗಳನ್ನಾಡಿರುವ ಭಾರತ ತಂಡ ೭ ರಲ್ಲಿ ಗೆಲುವು ಕಂಡರೆ ೬ ಪಂದ್ಯಗಳನ್ನು ಸೋತಿದೆ. ಇನ್ನುಳಿದ ೨೭ ಪಂದ್ಯಗಳು ಡ್ರಾ ಆಗಿದೆ.
ಭಾರತ ತಂಡದ ವಿರುದ್ಧ ಮೊದಲ ಟೆಸ್ಟ್ ಸೋತ ಆಸೀಸ್ ತಂಡ ತನ್ನ ಕಳೆದ 10 ವರ್ಷಗಳಲ್ಲಿ ಮೊದಲ ಸೋಲು ಕಂಡಿದೆ. ಭಾರತ ತಂಡ ಆಸೀಸ್ ವಿರುದ್ಧ ಮೊದಲ ಗೆಲುವು ದಾಖಲಿಸಿದೆ.
ಪಂದ್ಯ ಶ್ರೇಷ್ಠ: ಸ್ನೇಹ್ ರಾಣಾ
ಸಂಕ್ಷಿಪ್ತ ಸ್ಕೋರ್:
ಮೊದಲ ಇನಿಂಗ್ಸ್: ಆಸ್ಟ್ರೇಲಿಯಾ: 77.4 ಓವರ್ಗಳಲ್ಲಿ 219, ಭಾರತ: 126.3 ಓವರ್ಗಳಲ್ಲಿ 406.
ಎರಡನೇ ಇನಿಂಗ್ಸ್: ಆಸ್ಟ್ರೇಲಿಯಾ: 105.4 ಓವರ್ಗಳಲ್ಲಿ 261, ಭಾರತ 18.4 ಓವರ್ಗಳಲ್ಲಿ 75/3(ಸ್ಮೃತಿ ಮಂದಾನ 38*, ರಿಚಾ ಘೋಷ್ ಘೋಷ್ 13, ಜೆಮಿಮಾ ರಾಡ್ರಿಗಸ್ 12*)
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…