ಕ್ರೀಡೆ

ಭಾರತೀಯ ವನಿತೆಯರಿಗೆ ಆಸೀಸ್‌ ವಿರುದ್ಧ ಚೊಚ್ಚಲ ಗೆಲುವು

ಮುಂಬೈ: ಆಸೀಸ್‌ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಭಾರತ ವನಿತೆಯರ ತಂಡ ೮ ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಬ್ಯಾಟಿಂಗ್‌ ಮತು ಬೌಲಿಂಗ್‌ ಎರಡರಲ್ಲೂ ಪ್ರಾಬಲ್ಯ ಸಾಧಿಸಿದ ಟೀಂ ಇಂಡಿಯಾ ತಂಡ ತನ್ನ ತವರು ನೆಲದಲ್ಲಿ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾಗಿದ್ದಾರೆ.

ಶನಿವಾರದ ಅಂತಿಮ ದಿನದಾಟಕ್ಕೆ ಆಸೀಸ್‌ ೫ ವಿಕೆಟ್‌ ಕಳೆದುಕೊಂಡು ೨೩೩ ರನ್‌ ಕಲೆಹಾಕಿ ೪೭ರನ್‌ ಮುನ್ನಡೆಯೊಂದಿಗೆ ಇಂದು (ಭಾನುವಾರ) ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡ ಕೇವಲ ೨೮ ರನ್‌ ಗಳಿಸಿ ಉಳಿದ ೫ ವಿಕೆಟ್‌ಗಳನ್ನು ಕಳೆದುಕೊಂಡು ಭಾರತಕ್ಕೆ ೭೫ ರನ್‌ಗಳ ಗುರಿ ನೀಡಿತು.

ಅಂತಿಮ ದಿನದಾಟದಲ್ಲಿ ಆಕ್ರಮಣಕಾರಿ ದಾಳಿ ಮಾಡಿದ ಭಾರತ ತಂಡದ ಸ್ಪನ್ನರ್ಸ್‌ಗಳಾದ ಸ್ನೇಹಾ ರಾಣಾ, ರಾಜೇಶ್ವರಿ ಗಾಯಕ್ವಾಡ್‌, ದೀಪ್ತಿ ಶರ್ಮಾ ಆಸೀಸ್‌ ಪಡೆಯನ್ನು ಧೂಳಿಪಟ ಮಾಡಿದರು.

ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡ ಕೇವಲ ೨ ವಿಕೆಟ್‌ ಕಳೆದುಕೊಂಡು ಐತಿಹಾಸಿಕ ಗೆಲುವು ದಾಖಲಿಸಿತು. ಸ್ಮೃತಿ ಮಂದಾನ ೩೮*, ಜೆಮಿಯಾ ರಾಡ್ರಿಗಸ್‌ ೧೨ ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಈ ವರೆಗೆ ೪೦ ಟೆಸ್ಟ್‌ ಪಂದ್ಯಗಳನ್ನಾಡಿರುವ ಭಾರತ ತಂಡ ೭ ರಲ್ಲಿ ಗೆಲುವು ಕಂಡರೆ ೬ ಪಂದ್ಯಗಳನ್ನು ಸೋತಿದೆ. ಇನ್ನುಳಿದ ೨೭ ಪಂದ್ಯಗಳು ಡ್ರಾ ಆಗಿದೆ.

ಭಾರತ ತಂಡದ ವಿರುದ್ಧ ಮೊದಲ ಟೆಸ್ಟ್‌ ಸೋತ ಆಸೀಸ್‌ ತಂಡ ತನ್ನ ಕಳೆದ 10 ವರ್ಷಗಳಲ್ಲಿ ಮೊದಲ ಸೋಲು ಕಂಡಿದೆ. ಭಾರತ ತಂಡ ಆಸೀಸ್‌ ವಿರುದ್ಧ ಮೊದಲ ಗೆಲುವು ದಾಖಲಿಸಿದೆ.

ಪಂದ್ಯ ಶ್ರೇಷ್ಠ: ಸ್ನೇಹ್‌ ರಾಣಾ

ಸಂಕ್ಷಿಪ್ತ ಸ್ಕೋರ್‌:

ಮೊದಲ ಇನಿಂಗ್ಸ್‌: ಆಸ್ಟ್ರೇಲಿಯಾ: 77.4 ಓವರ್‌ಗಳಲ್ಲಿ 219, ಭಾರತ: 126.3 ಓವರ್‌ಗಳಲ್ಲಿ 406.

ಎರಡನೇ ಇನಿಂಗ್ಸ್: ಆಸ್ಟ್ರೇಲಿಯಾ: 105.4 ಓವರ್‌ಗಳಲ್ಲಿ 261, ಭಾರತ 18.4 ಓವರ್‌ಗಳಲ್ಲಿ 75/3(ಸ್ಮೃತಿ ಮಂದಾನ 38*, ರಿಚಾ ಘೋಷ್ ಘೋಷ್ 13, ಜೆಮಿಮಾ ರಾಡ್ರಿಗಸ್ 12*)

andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

3 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

3 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

4 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

4 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

5 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

5 hours ago