ಕ್ರೀಡೆ

ಭಾರತೀಯ ವನಿತೆಯರಿಗೆ ಆಸೀಸ್‌ ವಿರುದ್ಧ ಚೊಚ್ಚಲ ಗೆಲುವು

ಮುಂಬೈ: ಆಸೀಸ್‌ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಭಾರತ ವನಿತೆಯರ ತಂಡ ೮ ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಬ್ಯಾಟಿಂಗ್‌ ಮತು ಬೌಲಿಂಗ್‌ ಎರಡರಲ್ಲೂ ಪ್ರಾಬಲ್ಯ ಸಾಧಿಸಿದ ಟೀಂ ಇಂಡಿಯಾ ತಂಡ ತನ್ನ ತವರು ನೆಲದಲ್ಲಿ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾಗಿದ್ದಾರೆ.

ಶನಿವಾರದ ಅಂತಿಮ ದಿನದಾಟಕ್ಕೆ ಆಸೀಸ್‌ ೫ ವಿಕೆಟ್‌ ಕಳೆದುಕೊಂಡು ೨೩೩ ರನ್‌ ಕಲೆಹಾಕಿ ೪೭ರನ್‌ ಮುನ್ನಡೆಯೊಂದಿಗೆ ಇಂದು (ಭಾನುವಾರ) ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡ ಕೇವಲ ೨೮ ರನ್‌ ಗಳಿಸಿ ಉಳಿದ ೫ ವಿಕೆಟ್‌ಗಳನ್ನು ಕಳೆದುಕೊಂಡು ಭಾರತಕ್ಕೆ ೭೫ ರನ್‌ಗಳ ಗುರಿ ನೀಡಿತು.

ಅಂತಿಮ ದಿನದಾಟದಲ್ಲಿ ಆಕ್ರಮಣಕಾರಿ ದಾಳಿ ಮಾಡಿದ ಭಾರತ ತಂಡದ ಸ್ಪನ್ನರ್ಸ್‌ಗಳಾದ ಸ್ನೇಹಾ ರಾಣಾ, ರಾಜೇಶ್ವರಿ ಗಾಯಕ್ವಾಡ್‌, ದೀಪ್ತಿ ಶರ್ಮಾ ಆಸೀಸ್‌ ಪಡೆಯನ್ನು ಧೂಳಿಪಟ ಮಾಡಿದರು.

ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡ ಕೇವಲ ೨ ವಿಕೆಟ್‌ ಕಳೆದುಕೊಂಡು ಐತಿಹಾಸಿಕ ಗೆಲುವು ದಾಖಲಿಸಿತು. ಸ್ಮೃತಿ ಮಂದಾನ ೩೮*, ಜೆಮಿಯಾ ರಾಡ್ರಿಗಸ್‌ ೧೨ ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಈ ವರೆಗೆ ೪೦ ಟೆಸ್ಟ್‌ ಪಂದ್ಯಗಳನ್ನಾಡಿರುವ ಭಾರತ ತಂಡ ೭ ರಲ್ಲಿ ಗೆಲುವು ಕಂಡರೆ ೬ ಪಂದ್ಯಗಳನ್ನು ಸೋತಿದೆ. ಇನ್ನುಳಿದ ೨೭ ಪಂದ್ಯಗಳು ಡ್ರಾ ಆಗಿದೆ.

ಭಾರತ ತಂಡದ ವಿರುದ್ಧ ಮೊದಲ ಟೆಸ್ಟ್‌ ಸೋತ ಆಸೀಸ್‌ ತಂಡ ತನ್ನ ಕಳೆದ 10 ವರ್ಷಗಳಲ್ಲಿ ಮೊದಲ ಸೋಲು ಕಂಡಿದೆ. ಭಾರತ ತಂಡ ಆಸೀಸ್‌ ವಿರುದ್ಧ ಮೊದಲ ಗೆಲುವು ದಾಖಲಿಸಿದೆ.

ಪಂದ್ಯ ಶ್ರೇಷ್ಠ: ಸ್ನೇಹ್‌ ರಾಣಾ

ಸಂಕ್ಷಿಪ್ತ ಸ್ಕೋರ್‌:

ಮೊದಲ ಇನಿಂಗ್ಸ್‌: ಆಸ್ಟ್ರೇಲಿಯಾ: 77.4 ಓವರ್‌ಗಳಲ್ಲಿ 219, ಭಾರತ: 126.3 ಓವರ್‌ಗಳಲ್ಲಿ 406.

ಎರಡನೇ ಇನಿಂಗ್ಸ್: ಆಸ್ಟ್ರೇಲಿಯಾ: 105.4 ಓವರ್‌ಗಳಲ್ಲಿ 261, ಭಾರತ 18.4 ಓವರ್‌ಗಳಲ್ಲಿ 75/3(ಸ್ಮೃತಿ ಮಂದಾನ 38*, ರಿಚಾ ಘೋಷ್ ಘೋಷ್ 13, ಜೆಮಿಮಾ ರಾಡ್ರಿಗಸ್ 12*)

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago