ಕ್ರೀಡೆ

ಕೋಲ್ಕತ್ತಕ್ಕೆ ಆಗಮಿಸಿದ ಫುಟ್ಬಾಲ್ ಮಾಂತ್ರಿಕ ರೊನಾಲ್ಡಿನೊ

ಕೋಲ್ಕತ್ತಾ : ದುರ್ಗಾ ಪೂಜೆ ಸಂಭ್ರಮದ ನಡುವೆ, ಬ್ರೆಝಿಲ್ ಫುಟ್ಬಾಲ್ ದಂತಕತೆ ರೊನಾಲ್ಡಿನೊ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಕ್ಕೆ ಆಗಮಿಸಿದ್ದಾರೆ. ಮೂರು ಬಾರಿಯ ಚಿನ್ನದ ಚೆಂಡು ವಿಜೇತ ರೊನಾಲ್ಡಿನೊ ಫುಟ್ಬಾಲ್ ಹುಚ್ಚಿನ ನಗರಕ್ಕೆ ಬರುತ್ತಿರುವುದು ಇದು ಮೊದಲ ಬಾರಿಯಾಗಿದೆ.

ಕೋಲ್ಕತಕ್ಕೆ ಈವರೆಗೆ ಫುಟ್ಬಾಲ್ ಜಗತ್ತಿನ ಹಲವು ಮಾಂತ್ರಿಕರು ಭೇಟಿ ನೀಡಿದ್ದಾರೆ. ಪೆಲೆ, ಡೀಗೊ ಮರಡೋನ ಮತ್ತು ಲಿಯೊನೆಲ್ ಮೆಸ್ಸಿ ಅವರ ಪೈಕಿ ಕೆಲವರು.

2002ರ ವಿಶ್ವಕಪ್ ವಿಜೇತನನ್ನು ನಗರದ ಪೂಜಾ ಪೆಂಡಾಲ್ನಲ್ಲಿ ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರೊನಾಲ್ಡಿನೊ ಶ್ರೀಭೂಮಿ ಸ್ಪೋರ್ಟಿಂಗ್ ಕ್ಲಬ್ ದುರ್ಗಾ ಪೂಜಾ ಪೆಂಡಾಲನ್ನು ಉದ್ಘಾಟಿಸಿದರು. ಆ ಸಂದರ್ಭದಲ್ಲಿ ಅವರು ಇತರರ ಜೊತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂತು.

ಅವರು ಕೋಲ್ಕತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ. ಅವರು ತೃಣಮೂಲ ಕಾಂಗ್ರೆಸ್ ಶಾಸಕ ಸುಜಿತ್ ಬೋಸ್ ಜೊತೆ ಫುಟ್ಬಾಲ್ ಕೂಡ ಆಡಿದರು.

ತಾನು ಕೋಲ್ಕತಕ್ಕೆ ಭೇಟಿ ನೀಡುವುದಾಗಿ ರೊನಾಲ್ಡಿನೊ ಅಕ್ಟೋಬರ್ ಆರಂಭದಲ್ಲಿ ಘೋಷಿಸಿದ್ದರು. ‘‘ಎಲ್ಲರೂ ಕೇಳಿ… ಅಕ್ಟೊಬರ್ ಮಧ್ಯ ಭಾಗದಲ್ಲಿ ನಾನು ಕೋಲ್ಕತಕ್ಕೆ ಚೊಚ್ಚಲ ಭೇಟಿ ನೀಡುತ್ತಿದ್ದೇನೆ’’ ಎಂದು 43 ವರ್ಷದ ಫುಟ್ಬಾಲಿಗ ಫೇಸ್ ಬುಕ್ ನಲ್ಲಿ ಬರೆದಿದ್ದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago