ಕೋಲ್ಕತ್ತಾ : ದುರ್ಗಾ ಪೂಜೆ ಸಂಭ್ರಮದ ನಡುವೆ, ಬ್ರೆಝಿಲ್ ಫುಟ್ಬಾಲ್ ದಂತಕತೆ ರೊನಾಲ್ಡಿನೊ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಕ್ಕೆ ಆಗಮಿಸಿದ್ದಾರೆ. ಮೂರು ಬಾರಿಯ ಚಿನ್ನದ ಚೆಂಡು ವಿಜೇತ ರೊನಾಲ್ಡಿನೊ ಫುಟ್ಬಾಲ್ ಹುಚ್ಚಿನ ನಗರಕ್ಕೆ ಬರುತ್ತಿರುವುದು ಇದು ಮೊದಲ ಬಾರಿಯಾಗಿದೆ.
ಕೋಲ್ಕತಕ್ಕೆ ಈವರೆಗೆ ಫುಟ್ಬಾಲ್ ಜಗತ್ತಿನ ಹಲವು ಮಾಂತ್ರಿಕರು ಭೇಟಿ ನೀಡಿದ್ದಾರೆ. ಪೆಲೆ, ಡೀಗೊ ಮರಡೋನ ಮತ್ತು ಲಿಯೊನೆಲ್ ಮೆಸ್ಸಿ ಅವರ ಪೈಕಿ ಕೆಲವರು.
2002ರ ವಿಶ್ವಕಪ್ ವಿಜೇತನನ್ನು ನಗರದ ಪೂಜಾ ಪೆಂಡಾಲ್ನಲ್ಲಿ ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರೊನಾಲ್ಡಿನೊ ಶ್ರೀಭೂಮಿ ಸ್ಪೋರ್ಟಿಂಗ್ ಕ್ಲಬ್ ದುರ್ಗಾ ಪೂಜಾ ಪೆಂಡಾಲನ್ನು ಉದ್ಘಾಟಿಸಿದರು. ಆ ಸಂದರ್ಭದಲ್ಲಿ ಅವರು ಇತರರ ಜೊತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂತು.
ಅವರು ಕೋಲ್ಕತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ. ಅವರು ತೃಣಮೂಲ ಕಾಂಗ್ರೆಸ್ ಶಾಸಕ ಸುಜಿತ್ ಬೋಸ್ ಜೊತೆ ಫುಟ್ಬಾಲ್ ಕೂಡ ಆಡಿದರು.
ತಾನು ಕೋಲ್ಕತಕ್ಕೆ ಭೇಟಿ ನೀಡುವುದಾಗಿ ರೊನಾಲ್ಡಿನೊ ಅಕ್ಟೋಬರ್ ಆರಂಭದಲ್ಲಿ ಘೋಷಿಸಿದ್ದರು. ‘‘ಎಲ್ಲರೂ ಕೇಳಿ… ಅಕ್ಟೊಬರ್ ಮಧ್ಯ ಭಾಗದಲ್ಲಿ ನಾನು ಕೋಲ್ಕತಕ್ಕೆ ಚೊಚ್ಚಲ ಭೇಟಿ ನೀಡುತ್ತಿದ್ದೇನೆ’’ ಎಂದು 43 ವರ್ಷದ ಫುಟ್ಬಾಲಿಗ ಫೇಸ್ ಬುಕ್ ನಲ್ಲಿ ಬರೆದಿದ್ದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…