ಕ್ರೀಡೆ

ಕೋಲ್ಕತ್ತಕ್ಕೆ ಆಗಮಿಸಿದ ಫುಟ್ಬಾಲ್ ಮಾಂತ್ರಿಕ ರೊನಾಲ್ಡಿನೊ

ಕೋಲ್ಕತ್ತಾ : ದುರ್ಗಾ ಪೂಜೆ ಸಂಭ್ರಮದ ನಡುವೆ, ಬ್ರೆಝಿಲ್ ಫುಟ್ಬಾಲ್ ದಂತಕತೆ ರೊನಾಲ್ಡಿನೊ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಕ್ಕೆ ಆಗಮಿಸಿದ್ದಾರೆ. ಮೂರು ಬಾರಿಯ ಚಿನ್ನದ ಚೆಂಡು ವಿಜೇತ ರೊನಾಲ್ಡಿನೊ ಫುಟ್ಬಾಲ್ ಹುಚ್ಚಿನ ನಗರಕ್ಕೆ ಬರುತ್ತಿರುವುದು ಇದು ಮೊದಲ ಬಾರಿಯಾಗಿದೆ.

ಕೋಲ್ಕತಕ್ಕೆ ಈವರೆಗೆ ಫುಟ್ಬಾಲ್ ಜಗತ್ತಿನ ಹಲವು ಮಾಂತ್ರಿಕರು ಭೇಟಿ ನೀಡಿದ್ದಾರೆ. ಪೆಲೆ, ಡೀಗೊ ಮರಡೋನ ಮತ್ತು ಲಿಯೊನೆಲ್ ಮೆಸ್ಸಿ ಅವರ ಪೈಕಿ ಕೆಲವರು.

2002ರ ವಿಶ್ವಕಪ್ ವಿಜೇತನನ್ನು ನಗರದ ಪೂಜಾ ಪೆಂಡಾಲ್ನಲ್ಲಿ ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರೊನಾಲ್ಡಿನೊ ಶ್ರೀಭೂಮಿ ಸ್ಪೋರ್ಟಿಂಗ್ ಕ್ಲಬ್ ದುರ್ಗಾ ಪೂಜಾ ಪೆಂಡಾಲನ್ನು ಉದ್ಘಾಟಿಸಿದರು. ಆ ಸಂದರ್ಭದಲ್ಲಿ ಅವರು ಇತರರ ಜೊತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂತು.

ಅವರು ಕೋಲ್ಕತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ. ಅವರು ತೃಣಮೂಲ ಕಾಂಗ್ರೆಸ್ ಶಾಸಕ ಸುಜಿತ್ ಬೋಸ್ ಜೊತೆ ಫುಟ್ಬಾಲ್ ಕೂಡ ಆಡಿದರು.

ತಾನು ಕೋಲ್ಕತಕ್ಕೆ ಭೇಟಿ ನೀಡುವುದಾಗಿ ರೊನಾಲ್ಡಿನೊ ಅಕ್ಟೋಬರ್ ಆರಂಭದಲ್ಲಿ ಘೋಷಿಸಿದ್ದರು. ‘‘ಎಲ್ಲರೂ ಕೇಳಿ… ಅಕ್ಟೊಬರ್ ಮಧ್ಯ ಭಾಗದಲ್ಲಿ ನಾನು ಕೋಲ್ಕತಕ್ಕೆ ಚೊಚ್ಚಲ ಭೇಟಿ ನೀಡುತ್ತಿದ್ದೇನೆ’’ ಎಂದು 43 ವರ್ಷದ ಫುಟ್ಬಾಲಿಗ ಫೇಸ್ ಬುಕ್ ನಲ್ಲಿ ಬರೆದಿದ್ದರು.

andolanait

Recent Posts

ಸಂಕಷ್ಟಕ್ಕೆ ಸಿಲುಕಿದ ಸರ್ಕಾರಕ್ಕೆ ವರದಾನವಾದ ಕಬಿನಿ

ಮಂಜು ಕೋಟೆ ಕಬಿನಿ ಜಲಾಶಯ ಭರ್ತಿ; ೧೦ ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಬರದ ನಡುವೆಯೂ  ಕೇರಳದ…

2 mins ago

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

22 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

23 hours ago