ಕ್ರೀಡೆ

ಕೋಲ್ಕತ್ತಕ್ಕೆ ಆಗಮಿಸಿದ ಫುಟ್ಬಾಲ್ ಮಾಂತ್ರಿಕ ರೊನಾಲ್ಡಿನೊ

ಕೋಲ್ಕತ್ತಾ : ದುರ್ಗಾ ಪೂಜೆ ಸಂಭ್ರಮದ ನಡುವೆ, ಬ್ರೆಝಿಲ್ ಫುಟ್ಬಾಲ್ ದಂತಕತೆ ರೊನಾಲ್ಡಿನೊ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಕ್ಕೆ ಆಗಮಿಸಿದ್ದಾರೆ. ಮೂರು ಬಾರಿಯ ಚಿನ್ನದ ಚೆಂಡು ವಿಜೇತ ರೊನಾಲ್ಡಿನೊ ಫುಟ್ಬಾಲ್ ಹುಚ್ಚಿನ ನಗರಕ್ಕೆ ಬರುತ್ತಿರುವುದು ಇದು ಮೊದಲ ಬಾರಿಯಾಗಿದೆ.

ಕೋಲ್ಕತಕ್ಕೆ ಈವರೆಗೆ ಫುಟ್ಬಾಲ್ ಜಗತ್ತಿನ ಹಲವು ಮಾಂತ್ರಿಕರು ಭೇಟಿ ನೀಡಿದ್ದಾರೆ. ಪೆಲೆ, ಡೀಗೊ ಮರಡೋನ ಮತ್ತು ಲಿಯೊನೆಲ್ ಮೆಸ್ಸಿ ಅವರ ಪೈಕಿ ಕೆಲವರು.

2002ರ ವಿಶ್ವಕಪ್ ವಿಜೇತನನ್ನು ನಗರದ ಪೂಜಾ ಪೆಂಡಾಲ್ನಲ್ಲಿ ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರೊನಾಲ್ಡಿನೊ ಶ್ರೀಭೂಮಿ ಸ್ಪೋರ್ಟಿಂಗ್ ಕ್ಲಬ್ ದುರ್ಗಾ ಪೂಜಾ ಪೆಂಡಾಲನ್ನು ಉದ್ಘಾಟಿಸಿದರು. ಆ ಸಂದರ್ಭದಲ್ಲಿ ಅವರು ಇತರರ ಜೊತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂತು.

ಅವರು ಕೋಲ್ಕತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ. ಅವರು ತೃಣಮೂಲ ಕಾಂಗ್ರೆಸ್ ಶಾಸಕ ಸುಜಿತ್ ಬೋಸ್ ಜೊತೆ ಫುಟ್ಬಾಲ್ ಕೂಡ ಆಡಿದರು.

ತಾನು ಕೋಲ್ಕತಕ್ಕೆ ಭೇಟಿ ನೀಡುವುದಾಗಿ ರೊನಾಲ್ಡಿನೊ ಅಕ್ಟೋಬರ್ ಆರಂಭದಲ್ಲಿ ಘೋಷಿಸಿದ್ದರು. ‘‘ಎಲ್ಲರೂ ಕೇಳಿ… ಅಕ್ಟೊಬರ್ ಮಧ್ಯ ಭಾಗದಲ್ಲಿ ನಾನು ಕೋಲ್ಕತಕ್ಕೆ ಚೊಚ್ಚಲ ಭೇಟಿ ನೀಡುತ್ತಿದ್ದೇನೆ’’ ಎಂದು 43 ವರ್ಷದ ಫುಟ್ಬಾಲಿಗ ಫೇಸ್ ಬುಕ್ ನಲ್ಲಿ ಬರೆದಿದ್ದರು.

andolanait

Recent Posts

ಛಡ್ಡಾ ಬಿಜೆಪಿ ಸೇರ್ಪಡೆ ; ಜೆನ್-ಝೀಗಳಿಂದ ಅನ್‌ಫಾಲೋ ಅಭಿಯಾನ

ನವದೆಹಲಿ : ರಾಜ್ಯಸಭಾ ಸಂಸದ ರಾಘವ್‌ ಛಡ್ಡಾ ಅವರು ಎಎಪಿ(ಆಮ್‌ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…

12 mins ago

ಮೇ.2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಹೈ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್…

26 mins ago

ಓದುಗರ ಪತ್ರ | ಸಿಇಟಿ ; ನಿಯಮಗಳಿಗೆ ತಿದ್ದುಪಡಿ ಅವಶ್ಯ

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಸೋಲಾದದ್ದು ಮುಚ್ಚುಮರೆಯ ಕ್ಷೇತ್ರ ಪುನರ್‌ ವಿಂಗಡಣೆಗೆ

ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…

2 hours ago

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…

2 hours ago

ಆಂದೋಲನ ಹಾಡುಪಾಡು | ಚಾಮರಾಜನಗರದ ರಂಗಭೂಮಿಯ ಕಿರಣ

ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…

2 hours ago