ಕ್ರೀಡೆ

ಬಿಸಿಸಿಐ ಮಾಜಿ ಜಂಟಿ ಕಾರ್ಯದರ್ಶಿ ಅಮಿತಾಬ್ ಚೌಧರಿ ಇನ್ನಿಲ್ಲ

ರಾಂಚಿ : ಬಿಸಿಸಿಐ ಮಾಜಿ ಜಂಟಿ ಕಾರ್ಯದರ್ಶಿ ಹಾಗೂ ಜಾರ್ಖಂಡ್‌ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಅಮಿತಾಬ್ ಚೌಧರಿ, ಮಂಗಳವಾರವಾದ ಇಂದು ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಅಮಿತಾಬ್ ಚೌಧರಿ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೈನ್‌, ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

ಇಲ್ಲಿನ ಅಶೋಕ್ ನಗರ ನಿವಾಸಿಯಾಗಿದ್ದ ಅಮಿತಾಬ್ ಚೌಧರಿ, ಇಂದು ಮುಂಜಾನೆ ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಅಮಿತಾಬ್ ಚೌಧರಿ ಅವರಿಗೆ ಹೃದಯಸ್ತಂಭನವಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಪ್ರಯತ್ನಿಸಲಾಯಿತಾದರೂ, ಅವರನ್ನು ಪ್ರಾಣಾಪಾಯದಿಂದ ಪಾರು ಮಾಡಲು ವೈದ್ಯರಿಗೆ ಸಾಧ್ಯವಾಗಲಿಲ್ಲ.

ಇನ್ನು ಅಮಿತಾಬ್ ಚೌಧರಿಯವರ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕಂಬನಿ ಮಿಡಿದಿದ್ದಾರೆ. ಜಾರ್ಖಂಡ್ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷರಾದ ಶ್ರೀಯುತ ಅಮಿತಾಬ್ ಚೌಧರಿಯವರ ಆಕಸ್ಮಿಕ ನಿಧನದ ದುಃಖಕರವಾದ ಸುದ್ದಿ ತಿಳಿಯಿತು. ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಮಿತಾಬ್ ಚೌಧರಿಯವರು, ರಾಜ್ಯದಲ್ಲಿ ಕ್ರಿಕೆಟ್ ಕ್ರೀಡೆ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವನ್ನು ನಿಭಾಯಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಅಗಲಿಕೆಯ ದುಃಖ ಮರೆಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

andolana

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

8 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

8 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

8 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

9 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

9 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

9 hours ago