ಕ್ರೀಡೆ

ಬಿಸಿಸಿಐ ಮಾಜಿ ಜಂಟಿ ಕಾರ್ಯದರ್ಶಿ ಅಮಿತಾಬ್ ಚೌಧರಿ ಇನ್ನಿಲ್ಲ

ರಾಂಚಿ : ಬಿಸಿಸಿಐ ಮಾಜಿ ಜಂಟಿ ಕಾರ್ಯದರ್ಶಿ ಹಾಗೂ ಜಾರ್ಖಂಡ್‌ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಅಮಿತಾಬ್ ಚೌಧರಿ, ಮಂಗಳವಾರವಾದ ಇಂದು ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಅಮಿತಾಬ್ ಚೌಧರಿ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೈನ್‌, ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

ಇಲ್ಲಿನ ಅಶೋಕ್ ನಗರ ನಿವಾಸಿಯಾಗಿದ್ದ ಅಮಿತಾಬ್ ಚೌಧರಿ, ಇಂದು ಮುಂಜಾನೆ ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಅಮಿತಾಬ್ ಚೌಧರಿ ಅವರಿಗೆ ಹೃದಯಸ್ತಂಭನವಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಪ್ರಯತ್ನಿಸಲಾಯಿತಾದರೂ, ಅವರನ್ನು ಪ್ರಾಣಾಪಾಯದಿಂದ ಪಾರು ಮಾಡಲು ವೈದ್ಯರಿಗೆ ಸಾಧ್ಯವಾಗಲಿಲ್ಲ.

ಇನ್ನು ಅಮಿತಾಬ್ ಚೌಧರಿಯವರ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕಂಬನಿ ಮಿಡಿದಿದ್ದಾರೆ. ಜಾರ್ಖಂಡ್ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷರಾದ ಶ್ರೀಯುತ ಅಮಿತಾಬ್ ಚೌಧರಿಯವರ ಆಕಸ್ಮಿಕ ನಿಧನದ ದುಃಖಕರವಾದ ಸುದ್ದಿ ತಿಳಿಯಿತು. ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಮಿತಾಬ್ ಚೌಧರಿಯವರು, ರಾಜ್ಯದಲ್ಲಿ ಕ್ರಿಕೆಟ್ ಕ್ರೀಡೆ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವನ್ನು ನಿಭಾಯಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಅಗಲಿಕೆಯ ದುಃಖ ಮರೆಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

andolana

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

27 mins ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

38 mins ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

12 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

12 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

12 hours ago