ನವದೆಹಲಿ: ಸದ್ಯ ಸಕ್ರಿಯ ರಾಜಕಾರಣದಿಂದ ದೂರ ಉಳಿಯಲು ಇಚ್ಛಿಸಿದ್ದು, ನನ್ನ ಮುಂದಿನ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ವಹಿಸಲು ಇಚ್ಛಿಸುವುದಾಗಿ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮುಂದಿನ ದಿನಗಳಲ್ಲಿ ರಾಜಕೀಯದಿಂದ ದೂರ ಉಳಿದು, ಕ್ರಿಕೆಟ್ ಕಡೆ ಹೆಚ್ಚಿನ ಗಮನ ಕೇಂದ್ರಿಕರಿಸುವ ಬಗ್ಗೆ ತಮ್ಮ ಬೆಂಬಲಿಗರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ʼಪಕ್ಷದ ರಾಷ್ಟ್ರಾಧ್ಯಕ್ಷರಾದ ಜೆ.ಪಿ ನಡ್ಡಾ ಅವರಿಗೆ ಮನವಿ ಮಾಡುತ್ತೇನೆ, ನನ್ನನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಮನವಿ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಕ್ರಿಕೆಟ್ನತ್ತ ಹೆಚ್ಚಿನ ಗಮನ ಕೇಂದ್ರಿಕರಿಸಲು ಅವಕಾಶ ನೀಡಿ ಎಂದಿದ್ದಾರೆ. ಹಾಗೂ ಪಕ್ಷದಿಂದ ಜನ ಸೇವೆಗೆ ಅವಕಾಶ ಮಾಡಿಕೊಟ್ಟ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಜೈ ಹಿಂದ್ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
2011 ರ ವಿಶ್ವಕಪ್ ಫೈನಲ್ನಲ್ಲಿ ಟೀಂ ಇಂಡಿಯಾ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಗಂಭೀರ್, ರಾಜಕೀಯಕ್ಕೆ ಸೇರ್ಪಡೆಗೊಂಡ ಬಳಿಕ 2019 ರಲ್ಲಿ ಪೂರ್ವ ದಿಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇವರು 6,95,109 ಮತಗಳನ್ನು ಪಡೆಯುವ ಮೂಲಕ ಸಂಸದರಾಗಿ ಆಯ್ಕೆಯಾಗಿದ್ದರು.
ಈ ಬಾರಿಯ ಚನಾವಣೆಯಲ್ಲಿ ಗಂಭೀರ್ ಅವರಿಗೆ ಟಿಕೆಟ್ ಸಿಗವುದು ಅನುಮಾನ ಎಂದು ಊಹಾಪೋಹಗಳು ಹರಡಿದ ಬೆನ್ನಲ್ಲೇ ಇವರು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…