ನವದೆಹಲಿ: ಸದ್ಯ ಸಕ್ರಿಯ ರಾಜಕಾರಣದಿಂದ ದೂರ ಉಳಿಯಲು ಇಚ್ಛಿಸಿದ್ದು, ನನ್ನ ಮುಂದಿನ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ವಹಿಸಲು ಇಚ್ಛಿಸುವುದಾಗಿ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮುಂದಿನ ದಿನಗಳಲ್ಲಿ ರಾಜಕೀಯದಿಂದ ದೂರ ಉಳಿದು, ಕ್ರಿಕೆಟ್ ಕಡೆ ಹೆಚ್ಚಿನ ಗಮನ ಕೇಂದ್ರಿಕರಿಸುವ ಬಗ್ಗೆ ತಮ್ಮ ಬೆಂಬಲಿಗರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ʼಪಕ್ಷದ ರಾಷ್ಟ್ರಾಧ್ಯಕ್ಷರಾದ ಜೆ.ಪಿ ನಡ್ಡಾ ಅವರಿಗೆ ಮನವಿ ಮಾಡುತ್ತೇನೆ, ನನ್ನನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಮನವಿ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಕ್ರಿಕೆಟ್ನತ್ತ ಹೆಚ್ಚಿನ ಗಮನ ಕೇಂದ್ರಿಕರಿಸಲು ಅವಕಾಶ ನೀಡಿ ಎಂದಿದ್ದಾರೆ. ಹಾಗೂ ಪಕ್ಷದಿಂದ ಜನ ಸೇವೆಗೆ ಅವಕಾಶ ಮಾಡಿಕೊಟ್ಟ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಜೈ ಹಿಂದ್ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
2011 ರ ವಿಶ್ವಕಪ್ ಫೈನಲ್ನಲ್ಲಿ ಟೀಂ ಇಂಡಿಯಾ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಗಂಭೀರ್, ರಾಜಕೀಯಕ್ಕೆ ಸೇರ್ಪಡೆಗೊಂಡ ಬಳಿಕ 2019 ರಲ್ಲಿ ಪೂರ್ವ ದಿಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇವರು 6,95,109 ಮತಗಳನ್ನು ಪಡೆಯುವ ಮೂಲಕ ಸಂಸದರಾಗಿ ಆಯ್ಕೆಯಾಗಿದ್ದರು.
ಈ ಬಾರಿಯ ಚನಾವಣೆಯಲ್ಲಿ ಗಂಭೀರ್ ಅವರಿಗೆ ಟಿಕೆಟ್ ಸಿಗವುದು ಅನುಮಾನ ಎಂದು ಊಹಾಪೋಹಗಳು ಹರಡಿದ ಬೆನ್ನಲ್ಲೇ ಇವರು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…