ಕ್ರೀಡೆ

ಮುಖ್ಯ ಕೋಚ್‌ ಹುದ್ದೆಯಿಂದ ಹಿಂದೆ ಸರಿಯುವ ಕುರಿತು ಮಹತ್ವದ ಹೇಳಿಕೆ ನೀಡಿದ ರಾಹುಲ್‌ ದ್ರಾವಿಡ್‌

ಈ ಬಾರಿಯ ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾದ ಹೆಡ್‌ ಕೋಚ್‌ ಸ್ಥಾನದಿಂದ ರಾಹುಲ್‌ ದ್ರಾವಿಡ್‌ ಬಿಡುಗಡೆ ಹೊಂದಲಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಟಿ20 ವಿಶ್ವಕಪ್‌ ಬಳಿಕ ಟೀಂ ಇಂಡಿಯಾದ ಮುಖ್ಯ ಕೋಚ್‌ ಆಗಿ ತಮ್ಮ ಕಾರ್ಯಾವಧಿ ಮುಗಿಯಲಿದೆ ಎಂದು ರಾಹುಲ್‌ ದ್ರಾವಿಡ್‌ ಹೇಳಿದ್ದಾರೆ.

ಇನ್ನು ತಮ್ಮ ಅಧಿಕಾರಾವಧಿ ಮುಗಿದ ಬಳಿಕ ಟೀಂ ಇಂಡಿಯಾಗೆ ಗುಡ್‌ಬೈ ಹೇಳಲಿದ್ದು, ಮತ್ತೆ ಎಂದಿಗೂ ಮುಖ್ಯ ಕೋಚ್‌ ಹುದ್ದೆಗಾಗಿ ಅರ್ಜಿಯನ್ನು ಸಲ್ಲಿಸುವುದಿಲ್ಲ ಎಂದು ದ್ರಾವಿಡ್‌ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಅವರು ಟೀಂ ಇಂಡಿಯಾ ಜತೆಗಿನ ಸಂಬಂಧಕ್ಕೆ ಅಂತಿಮ ತೆರೆ ಎಳೆಯಲಿದ್ದಾರೆ.

2021ರಲ್ಲಿ ಟೀಂ ಇಂಡಿಯಾ ಕೋಚ್‌ ಆಗಿ ಅಧಿಕಾರ ಸ್ವೀಕರಿಸಿದ ದ್ರಾವಿಡ್‌ ಸದೃಢ ಟೀಂ ಕಟ್ಟಲು ಸಹಕರಿಸಿದ್ದರು. ಇವರ ಅವಧಿಯಲ್ಲಿ ಟೀಂ ಇಂಡಿಯಾ 2023 ರಲ್ಲಿ ಐಸಿಸಿ ಟೆಸ್ಟ್‌ ಚಾಂಪಿಯನ್ಸ್‌ ರನ್ನರ್ಸ್‌ ಹಾಗೂ ಏಕದಿನ ವಿಶ್ವಕಪ್‌ನಲ್ಲಿಯೂ ರನ್ನರ್ ಅಪ್‌ ಆಗಿ ಹೊರಹೊಮ್ಮಿತು. ಆದರೆ ಒಮ್ಮೆಯೂ ಭಾರತ ಐಸಿಸಿ ಟ್ರೋಫಿ ಎತ್ತುವಲ್ಲಿ ಸಫಲವಾಗಿಲ್ಲ. ಇನ್ನು ಇದೇ ಜೂನ್‌.2, 2024 ರಿಂದ ನಡೆಯುತ್ತಿರುವ ಟಿ20 ವಿಶ್ವಕಪ್‌ಗೆ ಕೋಚ್‌ ಆಗಿದ್ದು, ಇದಾದ ಬಳಿಕ ಹುದ್ದೆಯಿಂದ ಕೆಳಗಿಳಿಯುವುದಾಗಿ ಸ್ವತಃ ದ್ರಾವಿಡ್‌ ಅವರೇ ಘೋಷಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

22 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

22 hours ago