ಈ ಬಾರಿಯ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾದ ಹೆಡ್ ಕೋಚ್ ಸ್ಥಾನದಿಂದ ರಾಹುಲ್ ದ್ರಾವಿಡ್ ಬಿಡುಗಡೆ ಹೊಂದಲಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ತಮ್ಮ ಕಾರ್ಯಾವಧಿ ಮುಗಿಯಲಿದೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಇನ್ನು ತಮ್ಮ ಅಧಿಕಾರಾವಧಿ ಮುಗಿದ ಬಳಿಕ ಟೀಂ ಇಂಡಿಯಾಗೆ ಗುಡ್ಬೈ ಹೇಳಲಿದ್ದು, ಮತ್ತೆ ಎಂದಿಗೂ ಮುಖ್ಯ ಕೋಚ್ ಹುದ್ದೆಗಾಗಿ ಅರ್ಜಿಯನ್ನು ಸಲ್ಲಿಸುವುದಿಲ್ಲ ಎಂದು ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಅವರು ಟೀಂ ಇಂಡಿಯಾ ಜತೆಗಿನ ಸಂಬಂಧಕ್ಕೆ ಅಂತಿಮ ತೆರೆ ಎಳೆಯಲಿದ್ದಾರೆ.
2021ರಲ್ಲಿ ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ದ್ರಾವಿಡ್ ಸದೃಢ ಟೀಂ ಕಟ್ಟಲು ಸಹಕರಿಸಿದ್ದರು. ಇವರ ಅವಧಿಯಲ್ಲಿ ಟೀಂ ಇಂಡಿಯಾ 2023 ರಲ್ಲಿ ಐಸಿಸಿ ಟೆಸ್ಟ್ ಚಾಂಪಿಯನ್ಸ್ ರನ್ನರ್ಸ್ ಹಾಗೂ ಏಕದಿನ ವಿಶ್ವಕಪ್ನಲ್ಲಿಯೂ ರನ್ನರ್ ಅಪ್ ಆಗಿ ಹೊರಹೊಮ್ಮಿತು. ಆದರೆ ಒಮ್ಮೆಯೂ ಭಾರತ ಐಸಿಸಿ ಟ್ರೋಫಿ ಎತ್ತುವಲ್ಲಿ ಸಫಲವಾಗಿಲ್ಲ. ಇನ್ನು ಇದೇ ಜೂನ್.2, 2024 ರಿಂದ ನಡೆಯುತ್ತಿರುವ ಟಿ20 ವಿಶ್ವಕಪ್ಗೆ ಕೋಚ್ ಆಗಿದ್ದು, ಇದಾದ ಬಳಿಕ ಹುದ್ದೆಯಿಂದ ಕೆಳಗಿಳಿಯುವುದಾಗಿ ಸ್ವತಃ ದ್ರಾವಿಡ್ ಅವರೇ ಘೋಷಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…