ಕ್ರೀಡೆ

ಬಿಸಿಸಿಐ ಆಯ್ಕೆಗಾರರಿಗೆ ಕ್ರಿಕೆಟ್ ಜ್ಞಾನವಿಲ್ಲವೆಂದ ಮಾಜಿ ಆಟಗಾರ

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಈ ಟೀಕೆಗಳು ಹೆಚ್ಚಾಗಿದೆ. ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ ಅವರು ಟೀಂ ಇಂಡಿಯಾದ ಆಯ್ಕೆ ಸಮಿತಿಯ ವಿರುದ್ಧ ಕಿಡಿಕಾರಿದ್ದಾರೆ.

ಕೆಲವು ಆಯ್ಕೆದಾರರಿಗೆ ಅವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ದೂರದೃಷ್ಟಿ ಅಥವಾ ಆಳವಾದ ಜ್ಞಾನವಿಲ್ಲ ಎಂದು ವೆಂಗ್ ಸರ್ಕಾರ್ ಟೀಕಿಸಿದ್ದಾರೆ.

“ದುರದೃಷ್ಟಕರ ಅಂಶವೆಂದರೆ ಕಳೆದ ಆರು-ಏಳು ವರ್ಷಗಳಿಂದ ನಾನು ನೋಡಿದ ಆಯ್ಕೆದಾರರಿಗೆ ದೂರದೃಷ್ಟಿ, ಆಟದ ಬಗ್ಗೆ ಅಥವಾ ಕ್ರಿಕೆಟ್ ಪ್ರಜ್ಞೆಯ ಬಗ್ಗೆ ಆಳವಾದ ಜ್ಞಾನವಿಲ್ಲ. ಅವರು ಶಿಖರ್ ಧವನ್ ಅವರನ್ನು ಭಾರತ ನಾಯಕನನ್ನಾಗಿ ಮಾಡಿದರು (ಶ್ರೀಲಂಕಾ ಸರಣಿಗೆ) ಅಲ್ಲಿ ನೀವು ಭವಿಷ್ಯದ ನಾಯಕನನ್ನು ಆಯ್ಕೆ ಮಾಡಿ ಅವಕಾಶ ನೀಡಬಹುದಿತ್ತು” ಎಂದು ವೆಂಗ್‌ಸರ್ಕರ್ ತಿಳಿಸಿದರು.

ಭಾರತ ತಂಡದಲ್ಲಿ ನಾಯಕನ ಸ್ಥಾನಕ್ಕೆ ಆಯ್ಕೆಗಾರರು ಯಾರನ್ನೂ ಬೆಳೆಸದಿರುವ ಬಗ್ಗೆ ವೆಂಗ್‌ಸರ್ಕರ್ ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ. ಬಿಸಿಸಿಐ ವಿರುದ್ಧ ಕಿಡಿಕಾರಿದ ಅವರು, ಕೇವಲ ಇಂಡಿಯನ್ ಪ್ರೀಮಿಯರ್ ಲೀಗ್ ಇದ್ದರೆ ಸಾಕಾಗುವುದಿಲ್ಲ ಎಂದು ಸಲಹೆ ನೀಡಿದರು.

“ನೀವು ಯಾರನ್ನೂ ಸಿದ್ದಗೊಳಿಸಿಲ್ಲ. ಸಂದರ್ಭ ಬರುವವರೆಗೆ ಕಾಯುತ್ತೀರಿ. ಪ್ರಪಂಚದ ಶ್ರೀಮಂತ ಕ್ರಿಕೆಟ್ ಮಂಡಳಿ ಬಗ್ಗೆ ಮಾತನಾಡುತ್ತೀರಿ, ಬೆಂಚ್ ಸ್ಟ್ರೆಂತ್ ಎಲ್ಲಿದೆ? ಕೇವಲ ಐಪಿಎಲ್ ಅನ್ನು ಹೊಂದಿದ್ದು, ಮಾಧ್ಯಮ ಹಕ್ಕುಗಳಲ್ಲಿ ಕೋಟಿ ರೂಪಾಯಿ ಗಳಿಸಿದೆ, ಅದು ಮಾತ್ರ ಸಾಧನೆ ಆಗಬಾರದು” ಎಂದು ಅವರು ಹೇಳಿದರು.

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

3 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

3 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

4 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

4 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

4 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

4 hours ago