ಕ್ರೀಡೆ

ಬಿಸಿಸಿಐ ಆಯ್ಕೆಗಾರರಿಗೆ ಕ್ರಿಕೆಟ್ ಜ್ಞಾನವಿಲ್ಲವೆಂದ ಮಾಜಿ ಆಟಗಾರ

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಈ ಟೀಕೆಗಳು ಹೆಚ್ಚಾಗಿದೆ. ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ ಅವರು ಟೀಂ ಇಂಡಿಯಾದ ಆಯ್ಕೆ ಸಮಿತಿಯ ವಿರುದ್ಧ ಕಿಡಿಕಾರಿದ್ದಾರೆ.

ಕೆಲವು ಆಯ್ಕೆದಾರರಿಗೆ ಅವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ದೂರದೃಷ್ಟಿ ಅಥವಾ ಆಳವಾದ ಜ್ಞಾನವಿಲ್ಲ ಎಂದು ವೆಂಗ್ ಸರ್ಕಾರ್ ಟೀಕಿಸಿದ್ದಾರೆ.

“ದುರದೃಷ್ಟಕರ ಅಂಶವೆಂದರೆ ಕಳೆದ ಆರು-ಏಳು ವರ್ಷಗಳಿಂದ ನಾನು ನೋಡಿದ ಆಯ್ಕೆದಾರರಿಗೆ ದೂರದೃಷ್ಟಿ, ಆಟದ ಬಗ್ಗೆ ಅಥವಾ ಕ್ರಿಕೆಟ್ ಪ್ರಜ್ಞೆಯ ಬಗ್ಗೆ ಆಳವಾದ ಜ್ಞಾನವಿಲ್ಲ. ಅವರು ಶಿಖರ್ ಧವನ್ ಅವರನ್ನು ಭಾರತ ನಾಯಕನನ್ನಾಗಿ ಮಾಡಿದರು (ಶ್ರೀಲಂಕಾ ಸರಣಿಗೆ) ಅಲ್ಲಿ ನೀವು ಭವಿಷ್ಯದ ನಾಯಕನನ್ನು ಆಯ್ಕೆ ಮಾಡಿ ಅವಕಾಶ ನೀಡಬಹುದಿತ್ತು” ಎಂದು ವೆಂಗ್‌ಸರ್ಕರ್ ತಿಳಿಸಿದರು.

ಭಾರತ ತಂಡದಲ್ಲಿ ನಾಯಕನ ಸ್ಥಾನಕ್ಕೆ ಆಯ್ಕೆಗಾರರು ಯಾರನ್ನೂ ಬೆಳೆಸದಿರುವ ಬಗ್ಗೆ ವೆಂಗ್‌ಸರ್ಕರ್ ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ. ಬಿಸಿಸಿಐ ವಿರುದ್ಧ ಕಿಡಿಕಾರಿದ ಅವರು, ಕೇವಲ ಇಂಡಿಯನ್ ಪ್ರೀಮಿಯರ್ ಲೀಗ್ ಇದ್ದರೆ ಸಾಕಾಗುವುದಿಲ್ಲ ಎಂದು ಸಲಹೆ ನೀಡಿದರು.

“ನೀವು ಯಾರನ್ನೂ ಸಿದ್ದಗೊಳಿಸಿಲ್ಲ. ಸಂದರ್ಭ ಬರುವವರೆಗೆ ಕಾಯುತ್ತೀರಿ. ಪ್ರಪಂಚದ ಶ್ರೀಮಂತ ಕ್ರಿಕೆಟ್ ಮಂಡಳಿ ಬಗ್ಗೆ ಮಾತನಾಡುತ್ತೀರಿ, ಬೆಂಚ್ ಸ್ಟ್ರೆಂತ್ ಎಲ್ಲಿದೆ? ಕೇವಲ ಐಪಿಎಲ್ ಅನ್ನು ಹೊಂದಿದ್ದು, ಮಾಧ್ಯಮ ಹಕ್ಕುಗಳಲ್ಲಿ ಕೋಟಿ ರೂಪಾಯಿ ಗಳಿಸಿದೆ, ಅದು ಮಾತ್ರ ಸಾಧನೆ ಆಗಬಾರದು” ಎಂದು ಅವರು ಹೇಳಿದರು.

andolanait

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

36 mins ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

38 mins ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

43 mins ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

50 mins ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

4 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

4 hours ago