ಕ್ರೀಡೆ

ಬಿಸಿಸಿಐ ಆಯ್ಕೆಗಾರರಿಗೆ ಕ್ರಿಕೆಟ್ ಜ್ಞಾನವಿಲ್ಲವೆಂದ ಮಾಜಿ ಆಟಗಾರ

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಈ ಟೀಕೆಗಳು ಹೆಚ್ಚಾಗಿದೆ. ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ ಅವರು ಟೀಂ ಇಂಡಿಯಾದ ಆಯ್ಕೆ ಸಮಿತಿಯ ವಿರುದ್ಧ ಕಿಡಿಕಾರಿದ್ದಾರೆ.

ಕೆಲವು ಆಯ್ಕೆದಾರರಿಗೆ ಅವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ದೂರದೃಷ್ಟಿ ಅಥವಾ ಆಳವಾದ ಜ್ಞಾನವಿಲ್ಲ ಎಂದು ವೆಂಗ್ ಸರ್ಕಾರ್ ಟೀಕಿಸಿದ್ದಾರೆ.

“ದುರದೃಷ್ಟಕರ ಅಂಶವೆಂದರೆ ಕಳೆದ ಆರು-ಏಳು ವರ್ಷಗಳಿಂದ ನಾನು ನೋಡಿದ ಆಯ್ಕೆದಾರರಿಗೆ ದೂರದೃಷ್ಟಿ, ಆಟದ ಬಗ್ಗೆ ಅಥವಾ ಕ್ರಿಕೆಟ್ ಪ್ರಜ್ಞೆಯ ಬಗ್ಗೆ ಆಳವಾದ ಜ್ಞಾನವಿಲ್ಲ. ಅವರು ಶಿಖರ್ ಧವನ್ ಅವರನ್ನು ಭಾರತ ನಾಯಕನನ್ನಾಗಿ ಮಾಡಿದರು (ಶ್ರೀಲಂಕಾ ಸರಣಿಗೆ) ಅಲ್ಲಿ ನೀವು ಭವಿಷ್ಯದ ನಾಯಕನನ್ನು ಆಯ್ಕೆ ಮಾಡಿ ಅವಕಾಶ ನೀಡಬಹುದಿತ್ತು” ಎಂದು ವೆಂಗ್‌ಸರ್ಕರ್ ತಿಳಿಸಿದರು.

ಭಾರತ ತಂಡದಲ್ಲಿ ನಾಯಕನ ಸ್ಥಾನಕ್ಕೆ ಆಯ್ಕೆಗಾರರು ಯಾರನ್ನೂ ಬೆಳೆಸದಿರುವ ಬಗ್ಗೆ ವೆಂಗ್‌ಸರ್ಕರ್ ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ. ಬಿಸಿಸಿಐ ವಿರುದ್ಧ ಕಿಡಿಕಾರಿದ ಅವರು, ಕೇವಲ ಇಂಡಿಯನ್ ಪ್ರೀಮಿಯರ್ ಲೀಗ್ ಇದ್ದರೆ ಸಾಕಾಗುವುದಿಲ್ಲ ಎಂದು ಸಲಹೆ ನೀಡಿದರು.

“ನೀವು ಯಾರನ್ನೂ ಸಿದ್ದಗೊಳಿಸಿಲ್ಲ. ಸಂದರ್ಭ ಬರುವವರೆಗೆ ಕಾಯುತ್ತೀರಿ. ಪ್ರಪಂಚದ ಶ್ರೀಮಂತ ಕ್ರಿಕೆಟ್ ಮಂಡಳಿ ಬಗ್ಗೆ ಮಾತನಾಡುತ್ತೀರಿ, ಬೆಂಚ್ ಸ್ಟ್ರೆಂತ್ ಎಲ್ಲಿದೆ? ಕೇವಲ ಐಪಿಎಲ್ ಅನ್ನು ಹೊಂದಿದ್ದು, ಮಾಧ್ಯಮ ಹಕ್ಕುಗಳಲ್ಲಿ ಕೋಟಿ ರೂಪಾಯಿ ಗಳಿಸಿದೆ, ಅದು ಮಾತ್ರ ಸಾಧನೆ ಆಗಬಾರದು” ಎಂದು ಅವರು ಹೇಳಿದರು.

andolanait

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

4 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

7 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

7 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

8 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

8 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

8 hours ago