ಕ್ರೀಡೆ

ಬಿಸಿಸಿಐ ಆಯ್ಕೆಗಾರರಿಗೆ ಕ್ರಿಕೆಟ್ ಜ್ಞಾನವಿಲ್ಲವೆಂದ ಮಾಜಿ ಆಟಗಾರ

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಈ ಟೀಕೆಗಳು ಹೆಚ್ಚಾಗಿದೆ. ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ ಅವರು ಟೀಂ ಇಂಡಿಯಾದ ಆಯ್ಕೆ ಸಮಿತಿಯ ವಿರುದ್ಧ ಕಿಡಿಕಾರಿದ್ದಾರೆ.

ಕೆಲವು ಆಯ್ಕೆದಾರರಿಗೆ ಅವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ದೂರದೃಷ್ಟಿ ಅಥವಾ ಆಳವಾದ ಜ್ಞಾನವಿಲ್ಲ ಎಂದು ವೆಂಗ್ ಸರ್ಕಾರ್ ಟೀಕಿಸಿದ್ದಾರೆ.

“ದುರದೃಷ್ಟಕರ ಅಂಶವೆಂದರೆ ಕಳೆದ ಆರು-ಏಳು ವರ್ಷಗಳಿಂದ ನಾನು ನೋಡಿದ ಆಯ್ಕೆದಾರರಿಗೆ ದೂರದೃಷ್ಟಿ, ಆಟದ ಬಗ್ಗೆ ಅಥವಾ ಕ್ರಿಕೆಟ್ ಪ್ರಜ್ಞೆಯ ಬಗ್ಗೆ ಆಳವಾದ ಜ್ಞಾನವಿಲ್ಲ. ಅವರು ಶಿಖರ್ ಧವನ್ ಅವರನ್ನು ಭಾರತ ನಾಯಕನನ್ನಾಗಿ ಮಾಡಿದರು (ಶ್ರೀಲಂಕಾ ಸರಣಿಗೆ) ಅಲ್ಲಿ ನೀವು ಭವಿಷ್ಯದ ನಾಯಕನನ್ನು ಆಯ್ಕೆ ಮಾಡಿ ಅವಕಾಶ ನೀಡಬಹುದಿತ್ತು” ಎಂದು ವೆಂಗ್‌ಸರ್ಕರ್ ತಿಳಿಸಿದರು.

ಭಾರತ ತಂಡದಲ್ಲಿ ನಾಯಕನ ಸ್ಥಾನಕ್ಕೆ ಆಯ್ಕೆಗಾರರು ಯಾರನ್ನೂ ಬೆಳೆಸದಿರುವ ಬಗ್ಗೆ ವೆಂಗ್‌ಸರ್ಕರ್ ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ. ಬಿಸಿಸಿಐ ವಿರುದ್ಧ ಕಿಡಿಕಾರಿದ ಅವರು, ಕೇವಲ ಇಂಡಿಯನ್ ಪ್ರೀಮಿಯರ್ ಲೀಗ್ ಇದ್ದರೆ ಸಾಕಾಗುವುದಿಲ್ಲ ಎಂದು ಸಲಹೆ ನೀಡಿದರು.

“ನೀವು ಯಾರನ್ನೂ ಸಿದ್ದಗೊಳಿಸಿಲ್ಲ. ಸಂದರ್ಭ ಬರುವವರೆಗೆ ಕಾಯುತ್ತೀರಿ. ಪ್ರಪಂಚದ ಶ್ರೀಮಂತ ಕ್ರಿಕೆಟ್ ಮಂಡಳಿ ಬಗ್ಗೆ ಮಾತನಾಡುತ್ತೀರಿ, ಬೆಂಚ್ ಸ್ಟ್ರೆಂತ್ ಎಲ್ಲಿದೆ? ಕೇವಲ ಐಪಿಎಲ್ ಅನ್ನು ಹೊಂದಿದ್ದು, ಮಾಧ್ಯಮ ಹಕ್ಕುಗಳಲ್ಲಿ ಕೋಟಿ ರೂಪಾಯಿ ಗಳಿಸಿದೆ, ಅದು ಮಾತ್ರ ಸಾಧನೆ ಆಗಬಾರದು” ಎಂದು ಅವರು ಹೇಳಿದರು.

andolanait

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

14 mins ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

48 mins ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

1 hour ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

1 hour ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

4 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

5 hours ago