ಕ್ರೀಡೆ

ಫ್ರೆಂಚ್‌ ಓಪನ್‌: ಕಿರೀಟ ಉಳಿಸಿಕೊಂಡ ಸ್ವಿಯಾಟೆಕ್‌

ಪ್ಯಾರಿಸ್‌: ಪೋಲೆಂಡ್‌ನ‌ ಇಗಾ ಸ್ವಿಯಾಟೆಕ್‌ “ಪ್ಯಾರಿಸ್‌ ರಾಣಿ’”ಪಟ್ಟದಲ್ಲಿ ಮುಂದುವರಿದಿದ್ದಾರೆ. ಹಾಲಿ ಚಾಂಪಿಯನ್‌ ಆಗಿರುವ ಅವರು ಶನಿವಾರದ ಪ್ರಶಸ್ತಿ ಕಾಳಗದಲ್ಲಿ ಜೆಕ್‌ ಆಟಗಾರ್ತಿ ಕ್ಯಾರೋಲಿನಾ ಮುಕ್ಸೋವಾ ಅವರ ಆಟವನ್ನು 6-2, 5-7, 6-4 ಅಂತರದಿಂದ ಮುಗಿಸಿದರು.

ಮೊದಲ ಸೆಟ್‌ನ್ನು ಸುಲಭದಲ್ಲಿ ವಶಪಡಿಸಿಕೊಂಡ ಸ್ವಿಯಾಟೆಕ್‌, ದ್ವಿತೀಯ ಸೆಟ್‌ನಲ್ಲಿ ಎಡವಿದರು. ನಿರ್ಣಾಯಕ ಸೆಟ್‌ನ ಒಂದು ಹಂತದಲ್ಲಿ ಹಿನ್ನಡೆಯಲ್ಲಿದ್ದರು. ಆದರೆ ಮುಕ್ಸೋವಾಗೆ ಅದೃಷ್ಟ ಕೈಕೊಟ್ಟಿತು.

ಈ ಜಯದೊಂದಿಗೆ ಸ್ವಿಯಾಟೆಕ್‌ ಮೂರೂ ಫ್ರೆಂಚ್‌ ಓಪನ್‌ ಫೈನಲ್‌ನಲ್ಲಿ ಜಯಭೇರಿ ಮೊಳಗಿಸಿದಂತಾಯಿತು. ಮುಕ್ಸೋವಾ ಮೊದಲ ಸಲ ಗ್ರ್ಯಾನ್‌ಸ್ಲಾಮ್‌ ಫೈನಲ್‌ಗೆ ಲಗ್ಗೆ ಇರಿಸಿದ್ದರು.

22 ವರ್ಷದ ಸ್ವಿಯಾಟೆಕ್‌ 2005-07ರ ಬಳಿಕ ಇಲ್ಲಿ ಪ್ರಶಸ್ತಿ ಉಳಿಸಿಕೊಂಡ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಂದು ಜಸ್ಟಿನ್‌ ಹೆನಿನ್‌ ಪ್ರಶಸ್ತಿಗಳ ಹ್ಯಾಟ್ರಿಕ್‌ ಸಾಧಿಸಿದ್ದರು. ಹಾಗೆಯೇ ತಮ್ಮ ಮೊದಲ ನಾಲ್ಕೂ ಗ್ರ್ಯಾನ್‌ಸ್ಲಾಮ್‌ ಫೈನಲ್‌ಗ‌ಳನ್ನು ಗೆದ್ದ 3ನೇ ಆಟಗಾರ್ತಿ ಎನಿಸಿದರು. ಉಳಿ ದಿಬ್ಬರೆಂದರೆ ಮೋನಿಕಾ ಸೆಲೆಸ್‌ ಮತ್ತು ನವೋಮಿ ಒಸಾಕಾ.

andolanait

Recent Posts

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

8 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

8 hours ago

ಬೊಮ್ಮನದೊಡ್ಡಿ ಬಳಿ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…

8 hours ago

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…

9 hours ago

ಅಣ್ಣಾಮಲೈ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನಗೊಂಡಿದೆ. ರಾಜ್ಯ…

10 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್‌ ಪಡೆಯಲು ಒಪ್ಪಿದ್ದಾರೆ: ರಣದೀಪ್‌ ಸಿಂಗ್‌ ಸುರ್ಜೇವಾಲ

ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್‌ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌…

10 hours ago