ಕ್ರೀಡೆ

ಭಾರತ-ಪಾಕ್ ಆಟಗಾರರ ಸೌಹಾರ್ದ ಮಾತುಕತೆಗೆ ಗಂಭೀರ್ ಅಸಮಾಧಾನ

ಪಲ್ಲೆಕೆಲೆ : ಭಾರತ ಹಾಗೂ ಪಾಕಿಸ್ತಾನ ನಡುವಿನ ಏಶ್ಯಕಪ್ ನ ಪಂದ್ಯವು ಮಳೆಗಾಹುತಿಯಾದ ಕಾರಣ ಫಲಿತಾಂಶ ದಾಖಲಾಗಲಿಲ್ಲ, ಎರಡು ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ.

ಶನಿವಾರ ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರೀ ಮಳೆ ಸುರಿಯುತ್ತಿದ್ದಾಗ ಭಾರತ ಹಾಗೂ ಪಾಕಿಸ್ತಾನಿ ಆಟಗಾರರು ಪರಸ್ಪರ ಸೌಹಾರ್ದಯುತ ಮಾತುಕತೆಯಲ್ಲಿ ತೊಡಗಿರುವುದು ಕಂಡುಬಂತು. ವಿವಿಧ ತಂಡಗಳ ಆಟಗಾರರ ನಡುವೆ ಸ್ನೇಹ ಸಹಜವಾಗಿದ್ದರೂ, ಕ್ರಿಕೆಟ್ ಪಂದ್ಯಗಳ ಸಮಯದಲ್ಲಿ ಆಟಗಾರರ ನಡುವೆ ಅಂತಹ ಸೌಹಾರ್ದತೆಯನ್ನು ಪ್ರದರ್ಶಿಸುವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಿಡ್-ಗೇಮ್ ಶೋನಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾಟ್ ನಲ್ಲಿ ಮಾತನಾಡಿದ ಗಂಭೀರ್, ಭಾರತ ಕ್ರಿಕೆಟ್ ತಂಡವು 140 ಕೋಟಿ ಜನರನ್ನು ಪ್ರತಿನಿಧಿಸುತ್ತಿದೆ ಹಾಗೂ ಕ್ರೀಡಾಂಗಣದೊಳಗೆ ಸ್ನೇಹವನ್ನು ಪ್ರದರ್ಶಿಸಬಾರದು. ಅಂತಹ ಸ್ನೇಹ ಯಾವಾಗಲೂ ಮೈದಾನದಿಂದ ಹೊರಗೆ ಉಳಿಯಬೇಕು ಎಂದರು.

“ನೀವು ನಿಮ್ಮ ರಾಷ್ಟ್ರೀಯ ತಂಡಕ್ಕಾಗಿ ಮೈದಾನದಲ್ಲಿ ಆಡುವಾಗ, ನೀವು ಬೌಂಡರಿ ಗೆರೆಯ ಹೊರಗೆ ನಿಮ್ಮ ಸ್ನೇಹವನ್ನು ಬಿಡಬೇಕು. ಆಟ ಅತ್ಯಂತ ಮುಖ್ಯ. ದೋಸ್ತಿ ಮೈದಾನದಿಂದ ಹೊರಗಿರಬೇಕು.. ಎರಡೂ ತಂಡಗಳ ಆಟಗಾರರ ಕಣ್ಣಿನಲ್ಲಿ ಆಕ್ರಮಣಶೀಲತೆ ಇರಬೇಕು. ಆ ಆರು ಅಥವಾ ಏಳು ಗಂಟೆಗಳ ಕ್ರಿಕೆಟ್ ನ ನಂತರ ನಿಮಗೆ ಬೇಕಾದಷ್ಟು ಸ್ನೇಹಪರರಾಗಿರಿ. ಆ ಸಮಯ ಬಹಳ ಮುಖ್ಯ, ಏಕೆಂದರೆ ನೀವು ನಿಮ್ಮನ್ನು ಪ್ರತಿನಿಧಿಸುತ್ತಿಲ್ಲ, ನೀವು ಒಂದು ಶತಕೋಟಿಗೂ ಹೆಚ್ಚು ರಾಷ್ಟ್ರವನ್ನು ಪ್ರತಿನಿಧಿಸುತ್ತಿದ್ದೀರಿ” ಎಂದು ಗಂಭೀರ್ ಹೇಳಿದರು.

ಈ ದಿನಗಳಲ್ಲಿ ಪ್ರತಿಸ್ಪರ್ಧಿ ತಂಡಗಳ ಆಟಗಾರರು ಪಂದ್ಯದ ಸಮಯದಲ್ಲಿ ಪರಸ್ಪರ ಬೆನ್ನು ತಟ್ಟುವುದನ್ನು ಹಾಗೂ ಹಸ್ತಲಾಘವ ಮಾಡಿಕೊಳ್ಳುವುದನ್ನು ನೀವು ನೋಡುತ್ತೀರಿ. ಕೆಲವು ವರ್ಷಗಳ ಹಿಂದೆ ನೀವು ಅದನ್ನು ಎಂದಿಗೂ ನೋಡಲು ಸಾಧ್ಯವಿರಲಿಲ್ಲ’’ ಎಂದು ಗಂಭೀರ್ ಹೇಳಿದರು.

ಕ್ರಿಕೆಟಿಗ ಹಾಗೂ ರಾಜಕಾರಣಿಯಾಗಿರುವ ಗಂಭೀರ್, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಅವರೊಂದಿಗಿನ ತನ್ನ ಸ್ನೇಹವನ್ನು ಉಲ್ಲೇಖಿಸಿದ್ದಾರೆ.

“ನಾವು ತುಂಬಾ ಒಳ್ಳೆಯ ಸ್ನೇಹಿತರು. ವಾಸ್ತವವಾಗಿ, ನಾನು ಅವರಿಗೆ ಬ್ಯಾಟ್ ನೀಡಿದ್ದೇನೆ ಮತ್ತು ಅವರು ನನಗೆ ಬ್ಯಾಟ್ ಕೊಟ್ಟಿದ್ದಾರೆ. ಕಮ್ರಾನ್ ನನಗೆ ನೀಡಿದ ಬ್ಯಾಟ್ ನೊಂದಿಗೆ ನಾನು ಇಡೀ ಸೀಸನ್ ಅನ್ನು ಆಡಿದ್ದೇನೆ. ನಾವು ಇತ್ತೀಚೆಗೆ ಒಂದು ಗಂಟೆ ಮಾತನಾಡಿದ್ದೇವೆ” ಎಂದು ಗಂಭೀರ್ ಹೇಳಿದರು.

andolanait

Recent Posts

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

56 mins ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

1 hour ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

3 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

3 hours ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

3 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

4 hours ago