ಕ್ರೀಡೆ

ಭಾರತ-ಪಾಕ್ ಆಟಗಾರರ ಸೌಹಾರ್ದ ಮಾತುಕತೆಗೆ ಗಂಭೀರ್ ಅಸಮಾಧಾನ

ಪಲ್ಲೆಕೆಲೆ : ಭಾರತ ಹಾಗೂ ಪಾಕಿಸ್ತಾನ ನಡುವಿನ ಏಶ್ಯಕಪ್ ನ ಪಂದ್ಯವು ಮಳೆಗಾಹುತಿಯಾದ ಕಾರಣ ಫಲಿತಾಂಶ ದಾಖಲಾಗಲಿಲ್ಲ, ಎರಡು ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ.

ಶನಿವಾರ ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರೀ ಮಳೆ ಸುರಿಯುತ್ತಿದ್ದಾಗ ಭಾರತ ಹಾಗೂ ಪಾಕಿಸ್ತಾನಿ ಆಟಗಾರರು ಪರಸ್ಪರ ಸೌಹಾರ್ದಯುತ ಮಾತುಕತೆಯಲ್ಲಿ ತೊಡಗಿರುವುದು ಕಂಡುಬಂತು. ವಿವಿಧ ತಂಡಗಳ ಆಟಗಾರರ ನಡುವೆ ಸ್ನೇಹ ಸಹಜವಾಗಿದ್ದರೂ, ಕ್ರಿಕೆಟ್ ಪಂದ್ಯಗಳ ಸಮಯದಲ್ಲಿ ಆಟಗಾರರ ನಡುವೆ ಅಂತಹ ಸೌಹಾರ್ದತೆಯನ್ನು ಪ್ರದರ್ಶಿಸುವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಿಡ್-ಗೇಮ್ ಶೋನಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾಟ್ ನಲ್ಲಿ ಮಾತನಾಡಿದ ಗಂಭೀರ್, ಭಾರತ ಕ್ರಿಕೆಟ್ ತಂಡವು 140 ಕೋಟಿ ಜನರನ್ನು ಪ್ರತಿನಿಧಿಸುತ್ತಿದೆ ಹಾಗೂ ಕ್ರೀಡಾಂಗಣದೊಳಗೆ ಸ್ನೇಹವನ್ನು ಪ್ರದರ್ಶಿಸಬಾರದು. ಅಂತಹ ಸ್ನೇಹ ಯಾವಾಗಲೂ ಮೈದಾನದಿಂದ ಹೊರಗೆ ಉಳಿಯಬೇಕು ಎಂದರು.

“ನೀವು ನಿಮ್ಮ ರಾಷ್ಟ್ರೀಯ ತಂಡಕ್ಕಾಗಿ ಮೈದಾನದಲ್ಲಿ ಆಡುವಾಗ, ನೀವು ಬೌಂಡರಿ ಗೆರೆಯ ಹೊರಗೆ ನಿಮ್ಮ ಸ್ನೇಹವನ್ನು ಬಿಡಬೇಕು. ಆಟ ಅತ್ಯಂತ ಮುಖ್ಯ. ದೋಸ್ತಿ ಮೈದಾನದಿಂದ ಹೊರಗಿರಬೇಕು.. ಎರಡೂ ತಂಡಗಳ ಆಟಗಾರರ ಕಣ್ಣಿನಲ್ಲಿ ಆಕ್ರಮಣಶೀಲತೆ ಇರಬೇಕು. ಆ ಆರು ಅಥವಾ ಏಳು ಗಂಟೆಗಳ ಕ್ರಿಕೆಟ್ ನ ನಂತರ ನಿಮಗೆ ಬೇಕಾದಷ್ಟು ಸ್ನೇಹಪರರಾಗಿರಿ. ಆ ಸಮಯ ಬಹಳ ಮುಖ್ಯ, ಏಕೆಂದರೆ ನೀವು ನಿಮ್ಮನ್ನು ಪ್ರತಿನಿಧಿಸುತ್ತಿಲ್ಲ, ನೀವು ಒಂದು ಶತಕೋಟಿಗೂ ಹೆಚ್ಚು ರಾಷ್ಟ್ರವನ್ನು ಪ್ರತಿನಿಧಿಸುತ್ತಿದ್ದೀರಿ” ಎಂದು ಗಂಭೀರ್ ಹೇಳಿದರು.

ಈ ದಿನಗಳಲ್ಲಿ ಪ್ರತಿಸ್ಪರ್ಧಿ ತಂಡಗಳ ಆಟಗಾರರು ಪಂದ್ಯದ ಸಮಯದಲ್ಲಿ ಪರಸ್ಪರ ಬೆನ್ನು ತಟ್ಟುವುದನ್ನು ಹಾಗೂ ಹಸ್ತಲಾಘವ ಮಾಡಿಕೊಳ್ಳುವುದನ್ನು ನೀವು ನೋಡುತ್ತೀರಿ. ಕೆಲವು ವರ್ಷಗಳ ಹಿಂದೆ ನೀವು ಅದನ್ನು ಎಂದಿಗೂ ನೋಡಲು ಸಾಧ್ಯವಿರಲಿಲ್ಲ’’ ಎಂದು ಗಂಭೀರ್ ಹೇಳಿದರು.

ಕ್ರಿಕೆಟಿಗ ಹಾಗೂ ರಾಜಕಾರಣಿಯಾಗಿರುವ ಗಂಭೀರ್, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಅವರೊಂದಿಗಿನ ತನ್ನ ಸ್ನೇಹವನ್ನು ಉಲ್ಲೇಖಿಸಿದ್ದಾರೆ.

“ನಾವು ತುಂಬಾ ಒಳ್ಳೆಯ ಸ್ನೇಹಿತರು. ವಾಸ್ತವವಾಗಿ, ನಾನು ಅವರಿಗೆ ಬ್ಯಾಟ್ ನೀಡಿದ್ದೇನೆ ಮತ್ತು ಅವರು ನನಗೆ ಬ್ಯಾಟ್ ಕೊಟ್ಟಿದ್ದಾರೆ. ಕಮ್ರಾನ್ ನನಗೆ ನೀಡಿದ ಬ್ಯಾಟ್ ನೊಂದಿಗೆ ನಾನು ಇಡೀ ಸೀಸನ್ ಅನ್ನು ಆಡಿದ್ದೇನೆ. ನಾವು ಇತ್ತೀಚೆಗೆ ಒಂದು ಗಂಟೆ ಮಾತನಾಡಿದ್ದೇವೆ” ಎಂದು ಗಂಭೀರ್ ಹೇಳಿದರು.

andolanait

Recent Posts

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

12 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

33 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago