ಕ್ರೀಡೆ

ಭಾರತ-ಪಾಕ್ ಆಟಗಾರರ ಸೌಹಾರ್ದ ಮಾತುಕತೆಗೆ ಗಂಭೀರ್ ಅಸಮಾಧಾನ

ಪಲ್ಲೆಕೆಲೆ : ಭಾರತ ಹಾಗೂ ಪಾಕಿಸ್ತಾನ ನಡುವಿನ ಏಶ್ಯಕಪ್ ನ ಪಂದ್ಯವು ಮಳೆಗಾಹುತಿಯಾದ ಕಾರಣ ಫಲಿತಾಂಶ ದಾಖಲಾಗಲಿಲ್ಲ, ಎರಡು ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ.

ಶನಿವಾರ ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರೀ ಮಳೆ ಸುರಿಯುತ್ತಿದ್ದಾಗ ಭಾರತ ಹಾಗೂ ಪಾಕಿಸ್ತಾನಿ ಆಟಗಾರರು ಪರಸ್ಪರ ಸೌಹಾರ್ದಯುತ ಮಾತುಕತೆಯಲ್ಲಿ ತೊಡಗಿರುವುದು ಕಂಡುಬಂತು. ವಿವಿಧ ತಂಡಗಳ ಆಟಗಾರರ ನಡುವೆ ಸ್ನೇಹ ಸಹಜವಾಗಿದ್ದರೂ, ಕ್ರಿಕೆಟ್ ಪಂದ್ಯಗಳ ಸಮಯದಲ್ಲಿ ಆಟಗಾರರ ನಡುವೆ ಅಂತಹ ಸೌಹಾರ್ದತೆಯನ್ನು ಪ್ರದರ್ಶಿಸುವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಿಡ್-ಗೇಮ್ ಶೋನಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾಟ್ ನಲ್ಲಿ ಮಾತನಾಡಿದ ಗಂಭೀರ್, ಭಾರತ ಕ್ರಿಕೆಟ್ ತಂಡವು 140 ಕೋಟಿ ಜನರನ್ನು ಪ್ರತಿನಿಧಿಸುತ್ತಿದೆ ಹಾಗೂ ಕ್ರೀಡಾಂಗಣದೊಳಗೆ ಸ್ನೇಹವನ್ನು ಪ್ರದರ್ಶಿಸಬಾರದು. ಅಂತಹ ಸ್ನೇಹ ಯಾವಾಗಲೂ ಮೈದಾನದಿಂದ ಹೊರಗೆ ಉಳಿಯಬೇಕು ಎಂದರು.

“ನೀವು ನಿಮ್ಮ ರಾಷ್ಟ್ರೀಯ ತಂಡಕ್ಕಾಗಿ ಮೈದಾನದಲ್ಲಿ ಆಡುವಾಗ, ನೀವು ಬೌಂಡರಿ ಗೆರೆಯ ಹೊರಗೆ ನಿಮ್ಮ ಸ್ನೇಹವನ್ನು ಬಿಡಬೇಕು. ಆಟ ಅತ್ಯಂತ ಮುಖ್ಯ. ದೋಸ್ತಿ ಮೈದಾನದಿಂದ ಹೊರಗಿರಬೇಕು.. ಎರಡೂ ತಂಡಗಳ ಆಟಗಾರರ ಕಣ್ಣಿನಲ್ಲಿ ಆಕ್ರಮಣಶೀಲತೆ ಇರಬೇಕು. ಆ ಆರು ಅಥವಾ ಏಳು ಗಂಟೆಗಳ ಕ್ರಿಕೆಟ್ ನ ನಂತರ ನಿಮಗೆ ಬೇಕಾದಷ್ಟು ಸ್ನೇಹಪರರಾಗಿರಿ. ಆ ಸಮಯ ಬಹಳ ಮುಖ್ಯ, ಏಕೆಂದರೆ ನೀವು ನಿಮ್ಮನ್ನು ಪ್ರತಿನಿಧಿಸುತ್ತಿಲ್ಲ, ನೀವು ಒಂದು ಶತಕೋಟಿಗೂ ಹೆಚ್ಚು ರಾಷ್ಟ್ರವನ್ನು ಪ್ರತಿನಿಧಿಸುತ್ತಿದ್ದೀರಿ” ಎಂದು ಗಂಭೀರ್ ಹೇಳಿದರು.

ಈ ದಿನಗಳಲ್ಲಿ ಪ್ರತಿಸ್ಪರ್ಧಿ ತಂಡಗಳ ಆಟಗಾರರು ಪಂದ್ಯದ ಸಮಯದಲ್ಲಿ ಪರಸ್ಪರ ಬೆನ್ನು ತಟ್ಟುವುದನ್ನು ಹಾಗೂ ಹಸ್ತಲಾಘವ ಮಾಡಿಕೊಳ್ಳುವುದನ್ನು ನೀವು ನೋಡುತ್ತೀರಿ. ಕೆಲವು ವರ್ಷಗಳ ಹಿಂದೆ ನೀವು ಅದನ್ನು ಎಂದಿಗೂ ನೋಡಲು ಸಾಧ್ಯವಿರಲಿಲ್ಲ’’ ಎಂದು ಗಂಭೀರ್ ಹೇಳಿದರು.

ಕ್ರಿಕೆಟಿಗ ಹಾಗೂ ರಾಜಕಾರಣಿಯಾಗಿರುವ ಗಂಭೀರ್, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಅವರೊಂದಿಗಿನ ತನ್ನ ಸ್ನೇಹವನ್ನು ಉಲ್ಲೇಖಿಸಿದ್ದಾರೆ.

“ನಾವು ತುಂಬಾ ಒಳ್ಳೆಯ ಸ್ನೇಹಿತರು. ವಾಸ್ತವವಾಗಿ, ನಾನು ಅವರಿಗೆ ಬ್ಯಾಟ್ ನೀಡಿದ್ದೇನೆ ಮತ್ತು ಅವರು ನನಗೆ ಬ್ಯಾಟ್ ಕೊಟ್ಟಿದ್ದಾರೆ. ಕಮ್ರಾನ್ ನನಗೆ ನೀಡಿದ ಬ್ಯಾಟ್ ನೊಂದಿಗೆ ನಾನು ಇಡೀ ಸೀಸನ್ ಅನ್ನು ಆಡಿದ್ದೇನೆ. ನಾವು ಇತ್ತೀಚೆಗೆ ಒಂದು ಗಂಟೆ ಮಾತನಾಡಿದ್ದೇವೆ” ಎಂದು ಗಂಭೀರ್ ಹೇಳಿದರು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago