ನವದೆಹಲಿ: ನನ್ನ ಕ್ರಿಕೆಟ್ ಕೋಚಿಂಗ್ ಜೀವನದಲ್ಲಿ ಇಂತಹ ತಂಡವೊಂದನ್ನು ನೋಡಿಯೇ ಇಲ್ಲ, ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರಲ್ಲಿ ಯಾವುದೇ ಒಗ್ಗಟ್ಟಿಲ್ಲ ಎಂದು 2011ರ ವಿಶ್ವಕಪ್ ವಿಜೇತ ಭಾರತ ತಂಡದ ಕೋಚ್ ಆಗಿದ್ದ ಗ್ಯಾರಿ ಕರ್ಸ್ಟನ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಅಮೇರಿಕಾ, ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ನೀರಸ ಪ್ರದರ್ಶನ ತೋರಿತು. ಯುಎಸ್ಎ, ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಸೋಲುವ ಮೂಲಕ ವಿಶ್ವಕಪ್ನ ಲೀಗ್ ಹಂತದಲ್ಲಿಯೇ ತನ್ನ ಅಭಿಯಾನವನ್ನು ಮುಗಿಸಿತು.
ಟಿ20 ವಿಶ್ವಕಪ್ ನ ಗುಂಪು ಹಂತದಿಂದಲೇ ಪಾಕಿಸ್ತಾನ ಹೊರಬಿದ್ದ ಬೆನ್ನಲ್ಲೇ ತಂಡದ ಮುಖ್ಯ ಕೋಚ್ ಗ್ಯಾರಿ ಕರ್ಸ್ಟನ್ ಈ ಹೇಳಿಕೆ ನೀಡಿದ್ದಾರೆ. ಆ ಮೂಲಕ ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸಾಭೀತಾಗಿದೆ.
ಪಾಕ್ ತಂಡದಲ್ಲಿ ಯಾವುದೇ ಒಗ್ಗಟ್ಟಿಲ್ಲ. ನಾವೆಲ್ಲರೂ ಒಂದು ತಂಡ ಎಂದು ಹೇಳಿಕೊಂಡರು ಆದರೆ ತಂಡವಾಗಿ ಪ್ರದರ್ಶನ ತೋರುವಲ್ಲಿ ವಿಫಲರಾದರು. ಎಲ್ಲರೂ ಬೇರೆ ಬೇರೆಯಾಗಿಯೇ ಇರುತ್ತಿದ್ದರು. ಒಬ್ಬರು ಇನ್ನೊಬ್ಬರ ನೆರವಿಗೆ ಬರುತ್ತಿರಲಿಲ್ಲ. ನಾನು ನಾನಾ ತಂಡಗಳಲ್ಲಿ ಕೆಲಸ ಮಾಡಿದ್ದೇನೆ. ಈ ರೀತಿಯ ತಂಡದ ಸ್ಥಿತಿಯನ್ನು ನಾನು ನೋಡಿಯೇ ಇಲ್ಲ ಎಂದು ಕರ್ಸ್ಟನ್ ಹೇಳಿದ್ದಾರೆ ಎಂದು ವರದಿಯಾಗಿದೆ.
ಪಾಕ್ ಆಟಗಾರರಲ್ಲಿ ಸಾಮ್ಯತೆಯಿಲ್ಲ. ಕೌಶಲ ಮಟ್ಟದಲ್ಲಿ ತುಂಬಾ ಹಿಂದುಳಿದಿದ್ದಾರೆ. ಆಟಗಾರರು ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಜಿಯೋಸೂಪರ್.ಟಿವಿ4 ವರದಿ ಮಾಡಿದೆ.
ಬೆಂಗಳೂರು: ಹೈಕೋರ್ಟ್ಗೆ ಡಿಸೆಂಬರ್.20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…
ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಎಂದಿನಂತೆ…