ಕ್ರೀಡೆ

ಪಾಕಿಸ್ತಾನ ಆಟಗಾರರಲ್ಲಿ ಒಗ್ಗಟ್ಟಿಲ್ಲ: ವಿಶ್ವಕಪ್‌ ವಿಜೇತ ಕೋಚ್‌ ಗ್ಯಾರಿ ಕರ್ಸ್ಟನ್‌ ಬೇಸರ

ನವದೆಹಲಿ: ನನ್ನ ಕ್ರಿಕೆಟ್‌ ಕೋಚಿಂಗ್‌ ಜೀವನದಲ್ಲಿ ಇಂತಹ ತಂಡವೊಂದನ್ನು ನೋಡಿಯೇ ಇಲ್ಲ, ಪಾಕಿಸ್ತಾನ ಕ್ರಿಕೆಟ್‌ ತಂಡದ ಆಟಗಾರರಲ್ಲಿ ಯಾವುದೇ ಒಗ್ಗಟ್ಟಿಲ್ಲ ಎಂದು 2011ರ ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌ ಆಗಿದ್ದ ಗ್ಯಾರಿ ಕರ್ಸ್ಟನ್‌ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅಮೇರಿಕಾ, ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ನೀರಸ ಪ್ರದರ್ಶನ ತೋರಿತು. ಯುಎಸ್‌ಎ, ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಸೋಲುವ ಮೂಲಕ ವಿಶ್ವಕಪ್‌ನ ಲೀಗ್‌ ಹಂತದಲ್ಲಿಯೇ ತನ್ನ ಅಭಿಯಾನವನ್ನು ಮುಗಿಸಿತು.

ಟಿ20 ವಿಶ್ವಕಪ್‌ ನ ಗುಂಪು ಹಂತದಿಂದಲೇ ಪಾಕಿಸ್ತಾನ ಹೊರಬಿದ್ದ ಬೆನ್ನಲ್ಲೇ ತಂಡದ ಮುಖ್ಯ ಕೋಚ್‌ ಗ್ಯಾರಿ ಕರ್ಸ್ಟನ್‌ ಈ ಹೇಳಿಕೆ ನೀಡಿದ್ದಾರೆ. ಆ ಮೂಲಕ ಪಾಕ್‌ ಕ್ರಿಕೆಟ್ ಮಂಡಳಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸಾಭೀತಾಗಿದೆ.

ಪಾಕ್‌ ತಂಡದಲ್ಲಿ ಯಾವುದೇ ಒಗ್ಗಟ್ಟಿಲ್ಲ. ನಾವೆಲ್ಲರೂ ಒಂದು ತಂಡ ಎಂದು ಹೇಳಿಕೊಂಡರು ಆದರೆ ತಂಡವಾಗಿ ಪ್ರದರ್ಶನ ತೋರುವಲ್ಲಿ ವಿಫಲರಾದರು. ಎಲ್ಲರೂ ಬೇರೆ ಬೇರೆಯಾಗಿಯೇ ಇರುತ್ತಿದ್ದರು. ಒಬ್ಬರು ಇನ್ನೊಬ್ಬರ ನೆರವಿಗೆ ಬರುತ್ತಿರಲಿಲ್ಲ. ನಾನು ನಾನಾ ತಂಡಗಳಲ್ಲಿ ಕೆಲಸ ಮಾಡಿದ್ದೇನೆ. ಈ ರೀತಿಯ ತಂಡದ ಸ್ಥಿತಿಯನ್ನು ನಾನು ನೋಡಿಯೇ ಇಲ್ಲ ಎಂದು ಕರ್ಸ್ಟನ್‌ ಹೇಳಿದ್ದಾರೆ ಎಂದು ವರದಿಯಾಗಿದೆ.

ಪಾಕ್‌ ಆಟಗಾರರಲ್ಲಿ ಸಾಮ್ಯತೆಯಿಲ್ಲ. ಕೌಶಲ ಮಟ್ಟದಲ್ಲಿ ತುಂಬಾ ಹಿಂದುಳಿದಿದ್ದಾರೆ. ಆಟಗಾರರು ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಜಿಯೋಸೂಪರ್‌.ಟಿವಿ4 ವರದಿ ಮಾಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

31 mins ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

34 mins ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

37 mins ago

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…

39 mins ago

‘ಮೋದಿ ವಿದೇಶ ನೀತಿ ದೇಶದ ಹಿತಕ್ಕೆ ಮಾರಕ’

‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ  ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…

48 mins ago

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

4 hours ago